ಹನೂರು: ಸಮುದಾಯ ಭವನಗಳು ಸಭೆ ಸಮಾರಂಭಗಳಿಗೆ ಉಪಯೋಗವಾಗುವ ಜೊತೆಗೆ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆ ಕೇಂದ್ರಗಳಾಗಿ ಸಮುದಾಯಕ್ಕೆ ಬಳಕೆಯಾಗಬೇಕು ಎಂದು ಶಾಸಕ ಆರ್ ನರೇಂದ್ರ ಅಭಿಪ್ರಾಯ ಪಟ್ಟರು .
ತಾಲ್ಲೂಕಿನ ಬುದುಬಾಳು ಗ್ರಾಮದಲ್ಲಿ ಆದಿ ಜಾಂಬವ ಸಮುದಾಯ ಭವನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಹನೂರು ಕ್ಷೇತ್ರದಲ್ಲಿ ಒಟ್ಟು 140 ಸಮುದಾಯ ಭವನಗಳನ್ನು ನಿರ್ಮಾಣ ಮಾಡಲಾಗಿದ್ದು, ಅದರಲ್ಲಿ 40 ಸಮುದಾಯ ಭವನಗಳು ಆದಿ ಜಾಂಬವ ಜನಾಂಗದವರಿಗೆ ನಿರ್ಮಿಸಲಾಗಿದೆ. ಮದುವೆ ಸಭೆ ಸಮಾರಂಭಗಳ ಜೊತೆಗೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಅಭಿವೃದ್ಧಿಗೆ ಇಂತಹ ಸಮುದಾಯಗಳು ಭವನಗಳನ್ನು ಬಳಸಿಕೊಂಡಾಗ ಸಾರ್ಥಕತೆ ಯಾಗುತ್ತದೆ.
ಮಕ್ಕಳಿಗಾಗಿ ಆಸ್ತಿ ಮಾಡುವ ಬದಲಾಗಿ ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡಿ. ಅದರಲ್ಲೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದಕ್ಕೆ ಆದ್ಯತೆ ನೀಡಬೇಕು
ಮುಂಬರುವ ವಿಧಾನಸಭಾ ಚುನಾವಣೆಯು ಹಣಬಲ ಮತ್ತು ಜನಬಲದ ಆಧಾರದಲ್ಲಿ ನಡೆಯುತ್ತದೆ. ಆದ್ದರಿಂದ ನಿಮ್ಮ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿರುವ ವ್ಯಕ್ತಿಯನ್ನು ಬೆಂಬಲಿಸಬೇಕು ಎಂದರು. ಬೂದ ಬಾಳು ವೆಂಕಟರಮಣ ಸ್ವಾಮಿ ನಮ್ಮ ಮನೆದೇವರು ಸುಮಾರು ನಾಲ್ಕು ತಲೆಮಾರುಗಳಿಂದ ಬೂದು ಬಾಳು ಮತ್ತು ನಮ್ಮ ಕುಟುಂಬಕ್ಕೆ ಅವಿನಾಭವ ಸಂಬಂಧ ಇದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಂಗಾನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸರೋಜಮ್ಮ, ಉಪಾಧ್ಯಕ್ಷ ರಾಜಮ್ಮ, ಸದಸ್ಯರಾದ ಭಾಗ್ಯಲಕ್ಷ್ಮಿ ಕಾಂಗ್ರೆಸ್ ಮುಖಂಡರಾದ ಪುಟ್ಟರಾಜು, ಗುಂಡಾಪುರ ಮಹದೇಶ್.
ಸಮುದಾಯದ ಮುಖಂಡರಾದ. ಬೂದುಬಾಳು ರಂಗಯ್ಯ, ಮಹದೇವ, ಬಾಲರಾಜು, ರಾಜೇಶ, ಬಸವಣ್ಣ, ರಾಚಯ್ಯ. ಕಮಲಾಪುರ ರಾಜು ಹಾಗೂ ಗ್ರಾಮಸ್ಥರುಗಳು ಇದ್ದರು
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…