ಹನೂರು: ಸಮುದಾಯ ಭವನಗಳು ಸಭೆ ಸಮಾರಂಭಗಳಿಗೆ ಉಪಯೋಗವಾಗುವ ಜೊತೆಗೆ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಚಟುವಟಿಕೆ ಕೇಂದ್ರಗಳಾಗಿ ಸಮುದಾಯಕ್ಕೆ ಬಳಕೆಯಾಗಬೇಕು ಎಂದು ಶಾಸಕ ಆರ್ ನರೇಂದ್ರ ಅಭಿಪ್ರಾಯ ಪಟ್ಟರು .
ತಾಲ್ಲೂಕಿನ ಬುದುಬಾಳು ಗ್ರಾಮದಲ್ಲಿ ಆದಿ ಜಾಂಬವ ಸಮುದಾಯ ಭವನ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ಹನೂರು ಕ್ಷೇತ್ರದಲ್ಲಿ ಒಟ್ಟು 140 ಸಮುದಾಯ ಭವನಗಳನ್ನು ನಿರ್ಮಾಣ ಮಾಡಲಾಗಿದ್ದು, ಅದರಲ್ಲಿ 40 ಸಮುದಾಯ ಭವನಗಳು ಆದಿ ಜಾಂಬವ ಜನಾಂಗದವರಿಗೆ ನಿರ್ಮಿಸಲಾಗಿದೆ. ಮದುವೆ ಸಭೆ ಸಮಾರಂಭಗಳ ಜೊತೆಗೆ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಅಭಿವೃದ್ಧಿಗೆ ಇಂತಹ ಸಮುದಾಯಗಳು ಭವನಗಳನ್ನು ಬಳಸಿಕೊಂಡಾಗ ಸಾರ್ಥಕತೆ ಯಾಗುತ್ತದೆ.
ಮಕ್ಕಳಿಗಾಗಿ ಆಸ್ತಿ ಮಾಡುವ ಬದಲಾಗಿ ನಿಮ್ಮ ಮಕ್ಕಳಿಗೆ ಉತ್ತಮವಾದ ಶಿಕ್ಷಣ ಕೊಡಿಸಿ ಅವರನ್ನೇ ಆಸ್ತಿಯನ್ನಾಗಿ ಮಾಡಿ. ಅದರಲ್ಲೂ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸುವುದಕ್ಕೆ ಆದ್ಯತೆ ನೀಡಬೇಕು
ಮುಂಬರುವ ವಿಧಾನಸಭಾ ಚುನಾವಣೆಯು ಹಣಬಲ ಮತ್ತು ಜನಬಲದ ಆಧಾರದಲ್ಲಿ ನಡೆಯುತ್ತದೆ. ಆದ್ದರಿಂದ ನಿಮ್ಮ ಗ್ರಾಮದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿರುವ ವ್ಯಕ್ತಿಯನ್ನು ಬೆಂಬಲಿಸಬೇಕು ಎಂದರು. ಬೂದ ಬಾಳು ವೆಂಕಟರಮಣ ಸ್ವಾಮಿ ನಮ್ಮ ಮನೆದೇವರು ಸುಮಾರು ನಾಲ್ಕು ತಲೆಮಾರುಗಳಿಂದ ಬೂದು ಬಾಳು ಮತ್ತು ನಮ್ಮ ಕುಟುಂಬಕ್ಕೆ ಅವಿನಾಭವ ಸಂಬಂಧ ಇದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಂಗಾನಲ್ಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸರೋಜಮ್ಮ, ಉಪಾಧ್ಯಕ್ಷ ರಾಜಮ್ಮ, ಸದಸ್ಯರಾದ ಭಾಗ್ಯಲಕ್ಷ್ಮಿ ಕಾಂಗ್ರೆಸ್ ಮುಖಂಡರಾದ ಪುಟ್ಟರಾಜು, ಗುಂಡಾಪುರ ಮಹದೇಶ್.
ಸಮುದಾಯದ ಮುಖಂಡರಾದ. ಬೂದುಬಾಳು ರಂಗಯ್ಯ, ಮಹದೇವ, ಬಾಲರಾಜು, ರಾಜೇಶ, ಬಸವಣ್ಣ, ರಾಚಯ್ಯ. ಕಮಲಾಪುರ ರಾಜು ಹಾಗೂ ಗ್ರಾಮಸ್ಥರುಗಳು ಇದ್ದರು
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…