ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.
ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.
ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.
ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.
ಪುನೀತ್ ಕೊಡವ ಹಾಕಿ ಅಕಾಡೆಮಿ ಆಶ್ರಯದಲ್ಲಿ ಆಯೋಜನೆ; ವಿಜೇತ ತಂಡಕ್ಕೆ ೨ ಲಕ್ಷ ರೂ. ಬಹುಮಾನ ಮಡಿಕೇರಿ: ಕೊಡವ ಹಾಕಿ…
ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…
ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…
ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…