ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.
ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.
ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.
ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯಕ್ಕೆ ಕಾವೇರಿ ನದಿಯಿಂದ ಏತ ನೀರಾವರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಬೂದುಬಾಳು ಪುಣ್ಯ…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಿಸಿಬಿ ನಾರ್ಕೋಟಿಕ್ಸ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 10 ಕೋಟಿ ರೂಪಾಯಿ ಮೌಲ್ಯದ…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶತ್ರು ರಾಷ್ಟ್ರಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಅಮೇರಿಕಾದ ಬಳಿ ಮುಗಿಯದ ಶಸ್ತ್ರಾಸ್ತ್ರಗಳ ಬೃಹತ್…
ತವರಿನಲ್ಲೇ ಕಣ್ಣೀರಿಡುತ್ತಿರುವ ಜೀವನದಿ; ಸ್ವಚ್ಛತೆಗೆ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟದ ಎಚ್ಚರಿಕೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕೋಟ್ಯಾಂತರ ಜನರ ಜೀವನಾಡಿಯಾಗಿರುವ…
ಬೆಂಗಳೂರು: ಇಂದು ನಭೋ ಮಂಡಲ ಚಂದ್ರಗ್ರಹಣದ ಕೌತುಕಕ್ಕೆ ಸಾಕ್ಷಿಯಾಗಲಿದೆ. ಈ ರಕ್ತ ಚಂದ್ರಗ್ರಹಣ ಇಂದು ಮಧ್ಯಾಹ್ನ ಆರಂಭವಾಗಿ ಸಂಜೆ ವೇಳೆಗೆ…