ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.
ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.
ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.
ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…