ಜಿಲ್ಲೆಗಳು

ಇಲ್ಲೊಂದು ಸಮುದಾಯಕ್ಕೆ ಗೌರಿ-ಗಣೇಶ ಹಬ್ಬವೇ ತೊಡಕು

  • ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯ.‌
  • ವಿಘ್ನ ನಿವಾರಕನೇ ಇಲ್ಲಿ ಜನರಿಗೆ ವಿಘ್ನ.

ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.

ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.

ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ‌ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.

ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ‌. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.

andolanait

Recent Posts

ಸಂಪ್‌ಗೆ ಬಿದ್ದು ಎರಡು ವರ್ಷದ ಮಗು ಸಾವು

ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್‌ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…

24 mins ago

ಬಸ್-ಲಾರಿ ನಡುವೆ ಡಿಕ್ಕಿ; ಹಲವರಿಗೆ ಗಾಯ

ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್‌ಟಿಸಿ ಬಸ್…

44 mins ago

ಸಿಡಿಲು ಬಡಿದು ರೈತ ಸಾವು

ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…

2 hours ago

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…

2 hours ago

ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…

3 hours ago

ಉಡುಪಿ ಶ್ರೀಕೃಷ್ಣಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಭೇಟಿ

ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…

4 hours ago