ಜಿಲ್ಲೆಗಳು

ಇಲ್ಲೊಂದು ಸಮುದಾಯಕ್ಕೆ ಗೌರಿ-ಗಣೇಶ ಹಬ್ಬವೇ ತೊಡಕು

  • ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯ.‌
  • ವಿಘ್ನ ನಿವಾರಕನೇ ಇಲ್ಲಿ ಜನರಿಗೆ ವಿಘ್ನ.

ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.

ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.

ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ‌ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.

ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ‌. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.

andolanait

Recent Posts

ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸರ್ಕಾರ: ಮೇ.1ರಿಂದ ಮದ್ಯದ ಬೆಲೆ ಏರಿಕೆ

ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…

2 hours ago

ಹೆಚ್ಚಿದ ಬಿಸಿಲಿನ ತಾಪಮಾನ: ಹೀಟ್ ವೇವ್, ಹೀಟ್ ಸ್ಟ್ರೋಕ್ ಅಪಾಯ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…

2 hours ago

ಸಾರ್ವಜನಿಕವಾಗಿ ಕ್ಷಮೆಯಾಚಿಸಿದ ನಟ ಚೇತನ್‌ ಅಹಿಂಸಾ

ಬೆಂಗಳೂರು: ನಟ ರಾಜ್‌ ಕುಮಾರ್‌ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್‌ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್‌ಕುಮಾರ್‌…

2 hours ago

ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲ್ಲ: ಸಚಿವ ವೆಂಕಟೇಶ್‌

ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್.‌ ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…

2 hours ago

ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್‌ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…

3 hours ago

ಭಾರತವನ್ನು ನರಕಕೂಪ ಎಂದು ಹೀಯಾಳಿಸಿದ ಡೊನಾಲ್ಡ್ ಟ್ರಂಪ್‌: ವಿದೇಶಾಂಗ ಇಲಾಖೆ ಕಿಡಿ

ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…

4 hours ago