ಜಿಲ್ಲೆಗಳು

ಇಲ್ಲೊಂದು ಸಮುದಾಯಕ್ಕೆ ಗೌರಿ-ಗಣೇಶ ಹಬ್ಬವೇ ತೊಡಕು

  • ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯ.‌
  • ವಿಘ್ನ ನಿವಾರಕನೇ ಇಲ್ಲಿ ಜನರಿಗೆ ವಿಘ್ನ.

ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.

ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.

ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ‌ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.

ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ‌. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

9 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

9 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

9 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

9 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

9 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

9 hours ago