ಚಾಮರಾಜನಗರ: ದೇಶದಾದ್ಯಂತ ಬಹಳ ಶ್ರದ್ಧಾ ಭಕ್ತಿಯಿಂದ, ಸಡಗರ ಸಂಭ್ರಮದಿಂದ ಆಚರಣೆ ಮಾಡುವ ಗೌರಿ ಗಣೇಶ ಹಬ್ಬವೇ ಇಲ್ಲೊಂದು ಸಮುದಾಯಕ್ಕೆ ತೊಡಕಾಗಿದ್ದು, ಹಬ್ಬ ಆಚರಿಸಿದರೆ ಸಾವು ಸಂಭವಿಸುವ ಭಯದಿಂದ ಹಬ್ಬ ಆಚರಿಸುವುದನ್ನೇ ಕೈ ಬಿಟ್ಟಿದ್ದಾರೆ.
ನಗರದ ಉಪ್ಪಾರ ಸಮುದಾಯದ ಕೆಲವು ಕುಟುಂಬ ವರ್ಗದವರು ಗೌರಿ-ಗಣೇಶ ಹಬ್ಬವನ್ನು ಆಚರಣೆ ಮಾಡುವುದಿಲ್ಲ, ಇದು ಅಚ್ಚರಿ ಎನಿಸಿದರೂ ಇದು ಸತ್ಯ ಮನೆಯಲ್ಲಿ ಅನ್ನ, ಸ್ನಾನವನ್ನು ಮಾಡದ ಸಂಪ್ರದಾಯ ಶತಮಾನಗಳಿಂದ ನಡೆದುಕೊಂಡು ಬಂದಿದೆ. ವಿಘ್ನ ವಿನಾಯಕನನ್ನು ಇಡೀ ದೇಶವೇ ಬರಮಾಡಿಕೊಂಡು ಸಂಭ್ರಮಪಟ್ಟರೇ, ಇವರು ಮಾತ್ರ ಈ ಹಬ್ಬದಿಂದ ದೂರವೇ ಉಳಿಯುತ್ತಾರೆ. ಹಬ್ಬದ ಸಂಭ್ರಮದಿಂದ ಉಪ್ಪಾರ ಸಮುದಾಯದ ಶೇ.೭೦ ಕ್ಕೂ ಹೆಚ್ಚು ಮಂದಿ ದೂರ ಉಳಿಯುತ್ತಾರೆ.
ಗೌರಿ-ಗಣೇಶ ಹಬ್ಬ ಮಾಡುವುದಿರಲಿ, ರುಚಿಯಾದ ಊಟವನ್ನೂ ಸಹ ಈ ದಿನದಂದು ಸೇವಿಸುವುದಿಲ್ಲ. ಕೆಲವರು ಮುದ್ದೆ, ಉಪ್ಪುಸಾರು ಸೇವಿಸಿದರೆ, ಇನ್ನೂ ಕೆಲವರು ಉಪ್ಪುಸಾರಿಗೆ ಒಗ್ಗರಣೆಯನ್ನೂ ಹಾಕದೇ ಸಪ್ಪೆ ಸಾರಿನಲ್ಲೇ ಮುದ್ದೆ ತಿನ್ನುತ್ತಾರೆ. ಕೆಲವರು ಇದನ್ನು ಧಿಕ್ಕರಿಸಿ ಅನ್ನ- ಸಾರು ಮಾಡಿದ್ರೆ, ಅದನ್ನು ತಿನ್ನುವ ಮೊದಲೇ ಯಾರಾದರೂ ಮೃತಪಡುತ್ತಾರಂತೆ. ಆಹಾರದಲ್ಲಿ ಹುಳು ಕಾಣಿಸಿಕೊಂಡ ಪ್ರಸಂಗಗಳು ನಡೆದಿದ್ದರಿಂದ ಹಬ್ಬದ ಗೋಜಿಗೆ ಹೋಗದೇ ಮುದ್ದೆ- ಉಪ್ಪು ಸಾರಿಗಷ್ಟೇ ತೃಪ್ತಿ ಪಡುತ್ತಿದ್ದಾರೆ.
ಹಬ್ಬ ಆಚರಿಸದ ಕಾರಣ: ಗೌರಿ ಹಬ್ಬ ಆಚರಿಸಿದರೇ ಮಕ್ಕಳಿಗೆ ಕೆಡುಕಾಗುವ ಭಯ ಈ ಸಮುದಾಯದಲ್ಲಿ ರೂಢಿಗತವಾಗಿ ನಡೆದುಕೊಂಡು ಬಂದಿದೆ. ಹಬ್ಬ ಆಚರಣೆಗೆ ಮುಂದಾದಗಲೆಲ್ಲಾ ಮಕ್ಕಳ ಸಾವು, ಮನೆಯಲ್ಲಿ ಹಿರಿಯರ ಸಾವು ಸಂಭವಿಸುವುದರಿಂದ ಹಬ್ಬದ ಆಚರಣೆಯನ್ನೇ ಈ ಸಮುದಾಯ ಕೈ ಬಿಟ್ಟಿದೆ. ಹಿರಿಯರ ಸಂಪ್ರದಾಯ ಇಂದೂ ಕೂಡ ಹಾಗೆ ಮುಂದುವರೆದಿದ್ದು, ಹಬ್ಬದ ಮಾರನೇ ದಿನ ಸ್ನಾನ ಮಾಡಿಕೊಂಡು ಗಣಪನಿಗೆ ಪೂಜೆ ಸಲ್ಲಿಸುತ್ತಾರೆ. ಇನ್ನೂ, ಕೆಲವರು ಮೂರು ದಿನ ಅನ್ನ ಮಾಡದೇ, ದೇಗುಲಕ್ಕೆ ಹೋಗದೆ, ಒಗ್ಗರಣೆ ಹಾಕುವುದನ್ನು ನಿಲ್ಲಿಸುತ್ತಾರೆ.
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…
ನವದೆಹಲಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ನರಕಕೂಪ ಎಂದು ಉಲ್ಲೇಖಿಸಿರುವ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ. ಈ…