ಜಿಲ್ಲೆಗಳು

ಸ್ಯಾಂಟ್ರೋ ಬಂಧನ: ನಿಮಿಷಾಂಬಾ ದೇವಿಗೆ ಪೂಜೆ ಸಲ್ಲಿಸಿದ ಅಲೋಕ್‌ ಕುಮಾರ್‌

ಮಂಡ್ಯ: ಸ್ಯಾಂಟ್ರೋ ರವಿ ಬಂಧನದೊಂದಿಗೆ ರಾಜ್ಯ ಪೊಲೀಸರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಯಾಂಟ್ರೋ ರವಿಯನ್ನು ಕೋರ್ಟಿಗೆ ಹಾಜರುಪಡಿಸಿರುವ ಪೊಲೀಸರು ಈಗ ಆತನ ಪಾತಕ ಕೃತ್ಯಗಳನ್ನು ಬಾಯಿ ಬಿಡಿಸಲು ಸಿದ್ಧತೆ ನಡೆಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾದ ಈ ಆರೋಪಿಯನ್ನು ಹಿಡಿಯಲು ಎಡಿಜಿಪಿ ಅಲೋಕ್ ಕುಮಾರ್ ದೇವರಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಾಗಿತ್ತು. ಇದರಿಂದ ಪೊಲೀಸರು ಹಲವು ತಂಡಗಳನ್ನು ಮಾಡಿಕೊಂಡು ಬೇರೆ-ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಇತ್ತ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನ ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ದರು. ಇದೀಗ ಸ್ಯಾಂಟ್ರೋ ರವಿ ಪೊಲೀಸ್ ಬಲೆಗೆ ಬಿದ್ದ ಹಿನ್ನೆಲೆಯಲ್ಲಿ ಶನಿವಾರ ಅಲೋಕ್ ಕುಮಾರ್ ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, “” ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೇ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಐದೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಕಿಗೆ ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.

ಆತನಿಂದಾಗಿ (ಸ್ಯಾಂಟ್ರೋ ರವಿ) ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಈಗ ಸ್ಯಾಂಟ್ರೋ ರವಿ ನಮ್ಮ‌ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗ್ಗೆ ವಿಚಾರಣೆ ನಡೆಯಲಿದೆ. ಬಳಿಕ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ, ಆತನಿಗೆ ಯಾರೆಲ್ಲಾ ಸಹಾಯ ಮಾಡಿದ್ದರು ಎನ್ನುವ ಬಗ್ಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದ್ರು ಸಹಾಯ ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

andolanait

Recent Posts

ಮುಂದಿನ ಎರಡ್ಮೂರು ತಿಂಗಳಲ್ಲಿ ಜಿಲ್ಲಾ, ತಾಲ್ಲೂಕು ಪಂಚಾಯ್ತಿ ಚುನಾವಣೆ : ಕಾರ್ಯಕರ್ತರು ತಯಾರಾಗಿರಲು ಡಿಕೆಶಿ ಕರೆ

ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…

17 seconds ago

ನಾಳೆ ಮೈಸೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…

8 mins ago

ಇನ್ಸ್‌ಸ್ಟಾಗ್ರಾಂನಲ್ಲಿ ಬ್ಯಾಡ್‌ ಕಾಮೆಂಟ್‌ : ಸಾನ್ವಿ ಸುದೀಪ್‌ ಖಡಕ್‌ ತಿರುಗೇಟು

ಬೆಂಗಳೂರು : ನಟ ಕಿಚ್ಚ ಸುದೀಪ್‌ ಮಗಳು, ಗಾಯಕಿ ಸಾನ್ವಿ ಸುದೀಪ್‌ ಬಗ್ಗೆ ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಟ್ಟ…

31 mins ago

ಬೆಂಗಳೂರಿನಲ್ಲಿ 55 ಕೋಟಿ ಮೌಲ್ಯದ ಡ್ರಗ್ಸ್ ವಶ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಮಹಾರಾಷ್ಟ್ರದ ಎಎನ್‌ಟಿಎಫ್‌ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಡ್ರಗ್ಸ್‌ ಫ್ಯಾಕ್ಟರಿಗಳ ಮೇಲೆ ದಾಳಿ ನಡೆಸಿ ಬರೋಬ್ಬರಿ 55 ಕೋಟಿ ಮೌಲ್ಯದ…

45 mins ago

ಹುಣಸೂರು | ಹಾಡಹಗಲೇ 5 ಕೋಟಿ ಚಿನ್ನಾಭರಣ ದರೋಡೆ! ಬೈಕ್‌ನಲ್ಲಿ ಪರಾರಿ

ಹುಣಸೂರು : ಹುಣಸೂರು ನಗರದಲ್ಲಿ ಹಾಡಹಗಲೇ ದೊಡ್ಡ ದರೋಡೆ ನಡೆದಿದ್ದು, ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ…

2 hours ago

ವರ್ಷದ ಕೊನೆಯ ಮನ್‌ ಕಿ ಬಾತ್‌ನಲ್ಲಿ 2025ರ ಭಾರತದ ಸಾಧನೆ ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರು ಇಂದು ತಮ್ಮ 129ನೇ ಮನ್‌ ಕಿ ಬಾತ್‌ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. 2025ರಲ್ಲಿ ಭಾರತದ…

2 hours ago