ಜಿಲ್ಲೆಗಳು

ಸ್ಯಾಂಟ್ರೋ ಬಂಧನ: ನಿಮಿಷಾಂಬಾ ದೇವಿಗೆ ಪೂಜೆ ಸಲ್ಲಿಸಿದ ಅಲೋಕ್‌ ಕುಮಾರ್‌

ಮಂಡ್ಯ: ಸ್ಯಾಂಟ್ರೋ ರವಿ ಬಂಧನದೊಂದಿಗೆ ರಾಜ್ಯ ಪೊಲೀಸರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಯಾಂಟ್ರೋ ರವಿಯನ್ನು ಕೋರ್ಟಿಗೆ ಹಾಜರುಪಡಿಸಿರುವ ಪೊಲೀಸರು ಈಗ ಆತನ ಪಾತಕ ಕೃತ್ಯಗಳನ್ನು ಬಾಯಿ ಬಿಡಿಸಲು ಸಿದ್ಧತೆ ನಡೆಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾದ ಈ ಆರೋಪಿಯನ್ನು ಹಿಡಿಯಲು ಎಡಿಜಿಪಿ ಅಲೋಕ್ ಕುಮಾರ್ ದೇವರಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಾಗಿತ್ತು. ಇದರಿಂದ ಪೊಲೀಸರು ಹಲವು ತಂಡಗಳನ್ನು ಮಾಡಿಕೊಂಡು ಬೇರೆ-ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಇತ್ತ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನ ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ದರು. ಇದೀಗ ಸ್ಯಾಂಟ್ರೋ ರವಿ ಪೊಲೀಸ್ ಬಲೆಗೆ ಬಿದ್ದ ಹಿನ್ನೆಲೆಯಲ್ಲಿ ಶನಿವಾರ ಅಲೋಕ್ ಕುಮಾರ್ ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, “” ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೇ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಐದೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಕಿಗೆ ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.

ಆತನಿಂದಾಗಿ (ಸ್ಯಾಂಟ್ರೋ ರವಿ) ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಈಗ ಸ್ಯಾಂಟ್ರೋ ರವಿ ನಮ್ಮ‌ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗ್ಗೆ ವಿಚಾರಣೆ ನಡೆಯಲಿದೆ. ಬಳಿಕ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ, ಆತನಿಗೆ ಯಾರೆಲ್ಲಾ ಸಹಾಯ ಮಾಡಿದ್ದರು ಎನ್ನುವ ಬಗ್ಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದ್ರು ಸಹಾಯ ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago