ಜಿಲ್ಲೆಗಳು

ಸ್ಯಾಂಟ್ರೋ ಬಂಧನ: ನಿಮಿಷಾಂಬಾ ದೇವಿಗೆ ಪೂಜೆ ಸಲ್ಲಿಸಿದ ಅಲೋಕ್‌ ಕುಮಾರ್‌

ಮಂಡ್ಯ: ಸ್ಯಾಂಟ್ರೋ ರವಿ ಬಂಧನದೊಂದಿಗೆ ರಾಜ್ಯ ಪೊಲೀಸರು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಸ್ಯಾಂಟ್ರೋ ರವಿಯನ್ನು ಕೋರ್ಟಿಗೆ ಹಾಜರುಪಡಿಸಿರುವ ಪೊಲೀಸರು ಈಗ ಆತನ ಪಾತಕ ಕೃತ್ಯಗಳನ್ನು ಬಾಯಿ ಬಿಡಿಸಲು ಸಿದ್ಧತೆ ನಡೆಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾದ ಈ ಆರೋಪಿಯನ್ನು ಹಿಡಿಯಲು ಎಡಿಜಿಪಿ ಅಲೋಕ್ ಕುಮಾರ್ ದೇವರಿಗೆ ಹರಕೆ ಹೊತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಸ್ಯಾಂಟ್ರೋ ಬಂಧನಕ್ಕೆ ಪೊಲೀಸ್ ಇಲಾಖೆ ಮೇಲೆ ಒತ್ತಡ ಹೆಚ್ಚಾಗಿತ್ತು. ಇದರಿಂದ ಪೊಲೀಸರು ಹಲವು ತಂಡಗಳನ್ನು ಮಾಡಿಕೊಂಡು ಬೇರೆ-ಬೇರೆ ಕಡೆಗಳಲ್ಲಿ ಹುಡುಕಾಟ ನಡೆಸಿದ್ದರು. ಇತ್ತ ಅಲೋಕ್ ಕುಮಾರ್ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನ ನಿಮಿಷಾಂಭ ದೇವಿಗೆ ಹರಕೆ ಹೊತ್ತಿದ್ದರು. ಇದೀಗ ಸ್ಯಾಂಟ್ರೋ ರವಿ ಪೊಲೀಸ್ ಬಲೆಗೆ ಬಿದ್ದ ಹಿನ್ನೆಲೆಯಲ್ಲಿ ಶನಿವಾರ ಅಲೋಕ್ ಕುಮಾರ್ ನಿಮಿಷಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಹರಕೆ ತೀರಿಸಿದರು.

ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅಲೋಕ್ ಕುಮಾರ್, “” ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಮರ್ಡರ್ ಕೇಸ್ ಆಗಿತ್ತು. ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ. ಹಾಗೇ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಐದೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಕಿಗೆ ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ. ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ ಎಂದರು.

ಆತನಿಂದಾಗಿ (ಸ್ಯಾಂಟ್ರೋ ರವಿ) ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಈಗ ಸ್ಯಾಂಟ್ರೋ ರವಿ ನಮ್ಮ‌ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗ್ಗೆ ವಿಚಾರಣೆ ನಡೆಯಲಿದೆ. ಬಳಿಕ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ, ಆತನಿಗೆ ಯಾರೆಲ್ಲಾ ಸಹಾಯ ಮಾಡಿದ್ದರು ಎನ್ನುವ ಬಗ್ಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದ್ರು ಸಹಾಯ ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

9 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

9 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

10 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

11 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

15 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

15 hours ago