ಜಿಲ್ಲೆಗಳು

ಸ್ಯಾಂಟ್ರೊ ರವಿ ಪ್ರಕರಣ: ಮಾಹಿತಿ ಕಲೆಹಾಕಿದ ಎಡಿಜಿಪಿ

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೂರುವರೆ ತಾಸು ಸಭೆ ನಡೆಸಿದ ಅಲೋಕ್ ಕುಮಾರ್

ಮೈಸೂರು: ಸ್ಯಾಂಟ್ರೊ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಮೂರುವರೆ ತಾಸು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಹೆಚ್ಚಿನ ವಿಚಾರಣೆ ಸಂಬಂಧ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಧ್ಯಾಹ್ನ ಮೂರುವರೆ ತಾಸು ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಮತ್ತು ಪರಶು, ಸಂತ್ರಸ್ತ ಮಹಿಳೆ, ಕುಟುಂಬ ಸದಸ್ಯರಿಂದ ದಾಖಲೆಗಳ ಸಮೇತ ಮಾಹಿತಿ ಪಡೆದರು.
ಸ್ಯಾಂಟ್ರೊ ರವಿ ವಿರುದ್ಧ ೧೯೮೬ ರಿಂದ ೨೦೨೩ರ ಜ.೨ರವರೆಗೆ ಆತನ ವಿರುದ್ಧ ದಾಖಲಾದ ಪ್ರಕರಣಗಳ ಮಾಹಿತಿ, ಆತನ ಹಣಕಾಸು ಸಂಸ್ಥೆಗಳ ಮಾಹಿತಿ, ಆಸ್ತಿ ದಾಖಲೆ, ಪ್ರಭಾವಿಗಳೊಂದಿಗೆ ಆತ ತೆಗೆಸಿಕೊಂಡಿರುವ ಭಾವಚಿತ್ರಗಳು, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಆತನ ಪಾತ್ರದ ಕುರಿತಂತೆ ೧೪೦ ಪುಟಗಳ ಸಮಗ್ರ ದಾಖಲೆಗಳನ್ನು ಸ್ಟ್ಯಾನ್ಲಿ, ಪರಶು ಅವರು ಎಡಿಜಿಪಿಗೆ ಸಲ್ಲಿಸಿದರು.
ಆರೋಪಿಯು ಸಮಾಜದ ಸ್ವಾಸ್ಥ್ಯಕೆಡಿಸುತ್ತಿದ್ದು, ಸ್ಯಾಂಟ್ರೊ ರವಿಯೊಂದಿಗಿನ ಒಡನಾಟದಿಂದ ಪೊಲೀಸ್ ಇಲಾಖೆಯ ಹಿರಿಯ- ಕಿರಿಯ ಅಧಿಕಾರಿಗಳು ಕಳಂಕಿತರಾಗಿದ್ದಾರೆ. ಅವರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಒಡನಾಡಿ ಸಂಸ್ಥೆಯ ವತಿಯಿಂದ ಆಗ್ರಹಿಸಲಾಯಿತು.

ಈ ವೇಳೆ ಸಂತ್ರಸ್ತೆಯು ‘ಇದುವರೆಗೂ ಆರೋಪಿಯನ್ನು ಬಂಧಿಸಿಲ್ಲವೇಕೆ? ಇದರಿಂದ ನನಗೆ ಅನ್ಯಾಯವಾಗಿದೆ’ ಎಂದು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್ ಕುಮಾರ್, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಈಗಾಗಲೇ ವಿಶೇಷ ತಂಡ ರಚಿಸಿ, ಆತನ ಚಲನವಲನದ ಮೇಲೆ ನಿಗಾಯಿಡಲಾಗಿದೆ. ಆದಷ್ಟು ಶೀಘ್ರ ಬಂಧಿಸಲಾಗುವುದು’ ಎಂದು ಸಂತ್ರಸ್ತೆಗೆ ಭರವಸೆ ನೀಡಿದರು.

ಅಲ್ಲದೇ, ಸ್ಯಾಂಟ್ರೊ ರವಿಗೆ ಸಹಕರಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್, ಸುಳ್ಳುಪಾತ್ರ ಹಾಗೂ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿ ಸಂತ್ರಸ್ತೆ, ಆಕೆಯ ಸಹೋದರಿಯನ್ನು ಬಂಧಿಸಿದ್ದಕ್ಕೆ ಪ್ರತಿಯಾಗಿ ಪೊಲೀಸ್ ಅಧಿಕಾರಿಗಳಿಗೆ ಗೂಗಲ್ ಪೇ ಮೂಲಕ ಹಣ ಪಾವತಿಸಿದ ದಾಖಲೆಗಳನ್ನು ಸಂತ್ರಸ್ತೆ ಸಲ್ಲಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿ ಗೀತಾ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಸಿಪಿ ಶಿವಶಂಕರ್, ವಿಜಯ ನಗರ ಠಾಣೆ ಇನ್ಸ್‌ಪೆಕ್ಟರ್ ರವಿಶಂಕರ್ ಹಾಜರಿದ್ದರು.


ನಗರ ಪೊಲೀಸ್ ಆಯುಕ್ತರಿಗೆ ಸೂಚನೆ: ನಗರ ಪೊಲೀಸ್ ಆಯುಕ್ತ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಒಡನಾಡಿ ಸಂಸ್ಥೆಯ ನಿರ್ದೇಶಕರು, ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಂದ ಹಲವು ಮಾಹಿತಿಯನ್ನು ಪಡೆದುಕೊಂಡರು. ಸ್ಯಾಂಟ್ರೊ ರವಿ ಪ್ರಕರಣದ ಇಂಚಿಂಚೂ ತನಿಖೆಯಾಗಬೇಕು. ಆತನ ವಿರುದ್ಧ ದಾಖಲಾಗಿರುವ ಪ್ರಕರಣ, ಹಣಕಾಸು ವ್ಯವಹಾರಗಳು, ಅತ್ಯಾಚಾರ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಸಭೆಯಲ್ಲಿಯೇ ಸೂಚನೆ ನೀಡಿದರು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

6 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

7 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

8 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

12 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

12 hours ago