ಜಿಲ್ಲೆಗಳು

ಸ್ಯಾಂಟ್ರೊ ರವಿ ಪ್ರಕರಣ: ಮಾಹಿತಿ ಕಲೆಹಾಕಿದ ಎಡಿಜಿಪಿ

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮೂರುವರೆ ತಾಸು ಸಭೆ ನಡೆಸಿದ ಅಲೋಕ್ ಕುಮಾರ್

ಮೈಸೂರು: ಸ್ಯಾಂಟ್ರೊ ರವಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಅಲೋಕ್ ಕುಮಾರ್, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸುಮಾರು ಮೂರುವರೆ ತಾಸು ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಹೆಚ್ಚಿನ ವಿಚಾರಣೆ ಸಂಬಂಧ ಮಂಗಳವಾರ ನಗರಕ್ಕೆ ಭೇಟಿ ನೀಡಿದ ಅವರು, ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಧ್ಯಾಹ್ನ ಮೂರುವರೆ ತಾಸು ಒಡನಾಡಿ ಸಂಸ್ಥೆಯ ನಿರ್ದೇಶಕರಾದ ಸ್ಟ್ಯಾನ್ಲಿ ಮತ್ತು ಪರಶು, ಸಂತ್ರಸ್ತ ಮಹಿಳೆ, ಕುಟುಂಬ ಸದಸ್ಯರಿಂದ ದಾಖಲೆಗಳ ಸಮೇತ ಮಾಹಿತಿ ಪಡೆದರು.
ಸ್ಯಾಂಟ್ರೊ ರವಿ ವಿರುದ್ಧ ೧೯೮೬ ರಿಂದ ೨೦೨೩ರ ಜ.೨ರವರೆಗೆ ಆತನ ವಿರುದ್ಧ ದಾಖಲಾದ ಪ್ರಕರಣಗಳ ಮಾಹಿತಿ, ಆತನ ಹಣಕಾಸು ಸಂಸ್ಥೆಗಳ ಮಾಹಿತಿ, ಆಸ್ತಿ ದಾಖಲೆ, ಪ್ರಭಾವಿಗಳೊಂದಿಗೆ ಆತ ತೆಗೆಸಿಕೊಂಡಿರುವ ಭಾವಚಿತ್ರಗಳು, ಪೊಲೀಸ್ ಅಧಿಕಾರಿಗಳ ವರ್ಗಾವಣೆಯಲ್ಲಿ ಆತನ ಪಾತ್ರದ ಕುರಿತಂತೆ ೧೪೦ ಪುಟಗಳ ಸಮಗ್ರ ದಾಖಲೆಗಳನ್ನು ಸ್ಟ್ಯಾನ್ಲಿ, ಪರಶು ಅವರು ಎಡಿಜಿಪಿಗೆ ಸಲ್ಲಿಸಿದರು.
ಆರೋಪಿಯು ಸಮಾಜದ ಸ್ವಾಸ್ಥ್ಯಕೆಡಿಸುತ್ತಿದ್ದು, ಸ್ಯಾಂಟ್ರೊ ರವಿಯೊಂದಿಗಿನ ಒಡನಾಟದಿಂದ ಪೊಲೀಸ್ ಇಲಾಖೆಯ ಹಿರಿಯ- ಕಿರಿಯ ಅಧಿಕಾರಿಗಳು ಕಳಂಕಿತರಾಗಿದ್ದಾರೆ. ಅವರನ್ನೂ ತನಿಖೆಗೆ ಒಳಪಡಿಸಬೇಕು ಎಂದು ಒಡನಾಡಿ ಸಂಸ್ಥೆಯ ವತಿಯಿಂದ ಆಗ್ರಹಿಸಲಾಯಿತು.

ಈ ವೇಳೆ ಸಂತ್ರಸ್ತೆಯು ‘ಇದುವರೆಗೂ ಆರೋಪಿಯನ್ನು ಬಂಧಿಸಿಲ್ಲವೇಕೆ? ಇದರಿಂದ ನನಗೆ ಅನ್ಯಾಯವಾಗಿದೆ’ ಎಂದು ಅಳಲು ತೋಡಿಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಎಡಿಜಿಪಿ ಅಲೋಕ್ ಕುಮಾರ್, ಆರೋಪಿ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕೆ ಈಗಾಗಲೇ ವಿಶೇಷ ತಂಡ ರಚಿಸಿ, ಆತನ ಚಲನವಲನದ ಮೇಲೆ ನಿಗಾಯಿಡಲಾಗಿದೆ. ಆದಷ್ಟು ಶೀಘ್ರ ಬಂಧಿಸಲಾಗುವುದು’ ಎಂದು ಸಂತ್ರಸ್ತೆಗೆ ಭರವಸೆ ನೀಡಿದರು.

ಅಲ್ಲದೇ, ಸ್ಯಾಂಟ್ರೊ ರವಿಗೆ ಸಹಕರಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್, ಸುಳ್ಳುಪಾತ್ರ ಹಾಗೂ ಸುಳ್ಳು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿ ಸಂತ್ರಸ್ತೆ, ಆಕೆಯ ಸಹೋದರಿಯನ್ನು ಬಂಧಿಸಿದ್ದಕ್ಕೆ ಪ್ರತಿಯಾಗಿ ಪೊಲೀಸ್ ಅಧಿಕಾರಿಗಳಿಗೆ ಗೂಗಲ್ ಪೇ ಮೂಲಕ ಹಣ ಪಾವತಿಸಿದ ದಾಖಲೆಗಳನ್ನು ಸಂತ್ರಸ್ತೆ ಸಲ್ಲಿಸಿದರು.
ನಗರ ಪೊಲೀಸ್ ಆಯುಕ್ತ ಬಿ.ರಮೇಶ್, ಡಿಸಿಪಿ ಗೀತಾ, ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಎಸಿಪಿ ಶಿವಶಂಕರ್, ವಿಜಯ ನಗರ ಠಾಣೆ ಇನ್ಸ್‌ಪೆಕ್ಟರ್ ರವಿಶಂಕರ್ ಹಾಜರಿದ್ದರು.


ನಗರ ಪೊಲೀಸ್ ಆಯುಕ್ತರಿಗೆ ಸೂಚನೆ: ನಗರ ಪೊಲೀಸ್ ಆಯುಕ್ತ ಸೇರಿದಂತೆ ಇತರೆ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಎಡಿಜಿಪಿ ಅಲೋಕ್ ಕುಮಾರ್ ಅವರು, ಒಡನಾಡಿ ಸಂಸ್ಥೆಯ ನಿರ್ದೇಶಕರು, ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರಿಂದ ಹಲವು ಮಾಹಿತಿಯನ್ನು ಪಡೆದುಕೊಂಡರು. ಸ್ಯಾಂಟ್ರೊ ರವಿ ಪ್ರಕರಣದ ಇಂಚಿಂಚೂ ತನಿಖೆಯಾಗಬೇಕು. ಆತನ ವಿರುದ್ಧ ದಾಖಲಾಗಿರುವ ಪ್ರಕರಣ, ಹಣಕಾಸು ವ್ಯವಹಾರಗಳು, ಅತ್ಯಾಚಾರ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ರಮೇಶ್ ಅವರಿಗೆ ಸಭೆಯಲ್ಲಿಯೇ ಸೂಚನೆ ನೀಡಿದರು.

andolanait

Recent Posts

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

4 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

4 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

4 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

4 hours ago

ಓದುಗರ ಪತ್ರ: ಸ್ಥಾನ…ಮಾನ !

ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…

4 hours ago

ಓದುಗರ ಪತ್ರ: ಸಚಿವ ಸ್ಥಾನ: ಹಿರಿಯರ ನಿರ್ಲಕ್ಷ್ಯ ಸರಿಯಲ್ಲ

ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…

5 hours ago