ಜಿಲ್ಲೆಗಳು

ಸ್ಯಾಂಟ್ರೋ ರವಿ ಯಾರೆಂದೂ ಗೊತ್ತಿಲ್ಲ : ಸಿ.ಟಿ. ರವಿ

ಮೈಸೂರು: ನಾನು ಸಿ.ಟಿ.ರವಿ, ಸ್ಯಾಂಟ್ರೋ ರವಿ ಯಾರೆಂದೂ ಗೊತ್ತಿಲ್ಲ.ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದರು.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ‘‘ಈಗ ಯಾರು ಎಲ್ಲಿ ಬೇಕಾದರೂ, ಯಾರ ಜತೆಗೆ ಬೇಕಾದರೂ ಫೋಟೋ ತೆಗೆಸಿಕೊಳ್ಳುತ್ತಾರೆ. ಸಾರ್ವಜನಿಕ ಜೀವನದಲ್ಲಿ ಇರುವವರು ಹೋದ ಕಡೆ ಎಲ್ಲ ಸೆಲ್ಛಿಗೆ ಫೋಸ್ ಕೊಟ್ಟಿರುತ್ತಾರೆ. ಹಾಗೆಂದ ಮಾತ್ರಕ್ಕೆ ಫೋಟೋ ತೆಗೆಸಿಕೊಂಡವರ ಜತೆಗೆಲ್ಲ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದರು. ಸಾರ್ವಜನಿಕರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿದ ಐಎಂಎ ಹಗರಣದ ಎ ಒನ್ ಆರೋಪಿ ಜತೆ ಕುಮಾರಸ್ವಾಮಿ ಫೋಟೋ ತೆಗೆಸಿಕೊಂಡಿದ್ದಾರೆ. ಹಾಗೆಂದು ಕುಮಾರಸ್ವಾಮಿ ಅವರನ್ನು ಐಎಂಎ ಹಗರಣದ ಎ ಟು ಆರೋಪಿ ಎನ್ನಲು ಸಾಧ್ಯವೇ ಎಂದು ಖಾರವಾಗಿ ಪ್ರಶ್ನಿಸಿದರು.
ಹಲವು ಸಚಿವರು, ಶಾಸಕರು ತಮಗೆ ಸಂಬಂಧಿಸಿದ ಆಕ್ಷೇಪಾರ್ಹ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸದಂತೆ ನ್ಯಾಯಾಲಯದಿಂದ  ತಡೆಯಾಜ್ಞೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ‘‘ಪ್ರತಿಪಕ್ಷ ನಾಯಕರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ ಯಾವ್ಯಾವ ವಿಚಾರಕ್ಕೆ ತಡೆಯಾಜ್ಞೆ ತಂದಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

andolanait

Recent Posts

ಭಾರತದ ಜನಸಂಖ್ಯೆಯಲ್ಲಿ ಗಣನೀಯ ಕುಸಿತವಾಗುತ್ತಿದೆ: ಎಲಾನ್‌ ಮಸ್ಕ್‌ ಆತಂಕ

ವಾಷಿಂಗ್ಟನ್:‌ ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…

8 mins ago

ಸ್ವಕ್ಷೇತ್ರದಲ್ಲಿ ಜನರ ಮುಂದೆ ಸಿಎಂ ಡಿ.ಕೆ.ಶಿವಕುಮಾರ್‌ ಅಬ್ಬರದ ಭಾಷಣ

ರಾಮನಗರ: ನಾನು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಇಲ್ಲಿ ಮುಖ್ಯಮಂತ್ರಿ ಅಲ್ಲ. ನಿಮ್ಮ ಮನೆ ಮಗ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.…

1 hour ago

ಆಪರೇಷನ್‌ ಶೆರಾವಲಿ ವೇಳೆ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ…

2 hours ago

ರಾಜ್ಯದಲ್ಲಿ ಮುಂಗಾರು ಚುರುಕು: ಮೂರು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಮುಂದಿನ ಕೆಲ ದಿನಗಳು ಕರಾವಳಿ ಮತ್ತು ಉತ್ತರ ಒಳನಾಡಿನ ಹಲವೆಡೆ ಬಿರುಗಾಳಿ ಸಹಿತ…

2 hours ago

ಶಿವಾಜಿ ಗಣೇಶನ್ ಅವರ ವಾರದ ಅಂಕಣ : ಬಂಗಾಳ, ತಮಿಳುನಾಡಿನ ರಾಜಕಾರಣದಲ್ಲಿ ಬಿರುಗಾಳಿ

ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…

4 hours ago

ಭಾನುವಾರದ ಹಾಡುಪಾಡು | ಆಡುಮಾತಿಗೆ ಹತ್ತಿರವಿರುವ ಕಾವ್ಯಾನುವಾದ

ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…

5 hours ago