ಜಿಲ್ಲೆಗಳು

ಸ್ಯಾಂಟ್ರೋ ರವಿ ಯಾರೆಂದೂ ಗೊತ್ತಿಲ್ಲ : ಸಿ.ಟಿ. ರವಿ

ಮೈಸೂರು: ನಾನು ಸಿ.ಟಿ.ರವಿ, ಸ್ಯಾಂಟ್ರೋ ರವಿ ಯಾರೆಂದೂ ಗೊತ್ತಿಲ್ಲ.ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯಿಸಿದರು.
ಮೈಸೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ‘‘ಈಗ ಯಾರು ಎಲ್ಲಿ ಬೇಕಾದರೂ, ಯಾರ ಜತೆಗೆ ಬೇಕಾದರೂ ಫೋಟೋ ತೆಗೆಸಿಕೊಳ್ಳುತ್ತಾರೆ. ಸಾರ್ವಜನಿಕ ಜೀವನದಲ್ಲಿ ಇರುವವರು ಹೋದ ಕಡೆ ಎಲ್ಲ ಸೆಲ್ಛಿಗೆ ಫೋಸ್ ಕೊಟ್ಟಿರುತ್ತಾರೆ. ಹಾಗೆಂದ ಮಾತ್ರಕ್ಕೆ ಫೋಟೋ ತೆಗೆಸಿಕೊಂಡವರ ಜತೆಗೆಲ್ಲ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದರು. ಸಾರ್ವಜನಿಕರಿಗೆ ಕೋಟ್ಯಂತರ ರೂ. ಪಂಗನಾಮ ಹಾಕಿದ ಐಎಂಎ ಹಗರಣದ ಎ ಒನ್ ಆರೋಪಿ ಜತೆ ಕುಮಾರಸ್ವಾಮಿ ಫೋಟೋ ತೆಗೆಸಿಕೊಂಡಿದ್ದಾರೆ. ಹಾಗೆಂದು ಕುಮಾರಸ್ವಾಮಿ ಅವರನ್ನು ಐಎಂಎ ಹಗರಣದ ಎ ಟು ಆರೋಪಿ ಎನ್ನಲು ಸಾಧ್ಯವೇ ಎಂದು ಖಾರವಾಗಿ ಪ್ರಶ್ನಿಸಿದರು.
ಹಲವು ಸಚಿವರು, ಶಾಸಕರು ತಮಗೆ ಸಂಬಂಧಿಸಿದ ಆಕ್ಷೇಪಾರ್ಹ ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸದಂತೆ ನ್ಯಾಯಾಲಯದಿಂದ  ತಡೆಯಾಜ್ಞೆ ತಂದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ‘‘ಪ್ರತಿಪಕ್ಷ ನಾಯಕರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಆದರೆ ಯಾವ್ಯಾವ ವಿಚಾರಕ್ಕೆ ತಡೆಯಾಜ್ಞೆ ತಂದಿದ್ದಾರೋ ಗೊತ್ತಿಲ್ಲ ಎಂದು ಹೇಳಿದರು.

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

41 mins ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

43 mins ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

45 mins ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

47 mins ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

51 mins ago