ಜಿಲ್ಲೆಗಳು

ಸರಗೂರು: ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಕಾಡಾನೆಗಳ ಹಿಂಡು

ಸರಗೂರು: ೫ ಕಾಡಾನೆಗಳ ಗುಂಪೊಂದು ಪ್ರತ್ಯೇಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ತಾಲ್ಲೂಕಿನ ನುಗು ಹಿನ್ನೀರು ಸಮೀಪ ಹೊಸಬಿರ್ವಾಳು ಗ್ರಾಮ ಹಾಗೂ ಮುಳ್ಳೂರು ಗ್ರಾಮದ ಹೊರವಯದಲ್ಲಿ ನಡೆದಿದೆ.
ತಾಲ್ಲೂಕು ಬಂಡೀಪುರ ವನ್ಯಜೀವಿ ವಲಯದಿಂದ ನುಗು ಜಲಾಶಯದ ಹಿನ್ನೀರಿನ ಮಾರ್ಗವಾಗಿ ಕಾಡಿನಿಂದ ಆಚೆ ಬಂದ ೫ ಕಾಡಾನೆಗಳ ಗುಂಪೊಂದು ಹೊಸಬಿರ್ವಾಳು ಮತ್ತು ಮುಳ್ಳುರು ಗ್ರಾಮದ ನಡುವಿನ ಬೆಟ್ಟದ ತಪ್ಪಲಿನ ಕಬ್ಬಿನ ಗದ್ದೆಯನ್ನು ಸೇರಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಬುಧವಾರ ಬೆಳಗ್ಗೆ ೭ ಗಂಟೆಗೆ ೫ ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ತಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳನ್ನು ಕಾಡಿಗೆ ಓಡಿಸಲು ಸಾಕಷ್ಟು ಶ್ರಮಿಸಿದಾದರೂ ಆನೆಗಳು ಪಕ್ಕದ ಕಬ್ಬಿನ ಗದ್ದೆಯನ್ನು ಸೇರಿಕೊಂಡಿವೆ.

ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟ ಕಾಡಾನೆಗಳು: ಕಾಡಿನಿಂದ ಹೊರಬಂದ ಆನೆಗಳ ಗುಂಪು ಕಬ್ಬಿನ ಗದ್ದೆಯನ್ನು ಸೇರಿ ರಾಗಿ ಇತರ ಬೆಳೆಗಳು ಸೇರಿದಂತೆ ಕಬ್ಬನ್ನು ಬೆಳೆಗಳನ್ನು ನಾಶ ಮಾಡಿವೆ ಎಂದು ರೈತರು ಆತಂಕ ಹೊರಹಾಕಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಅಧಿಕಾರಿಗಳು ಗನ್ ಹಿಡಿದು, ಪಟಾಕಿಗಳನ್ನು ಸಿಡಿಸಿ ಓಡಿಸಲು ಪ್ರಯತ್ನಿಸಿದ್ದಾರೂ ಎರಡು ಭಾರಿ ಆನೆಗಳು ಗದ್ದೆಯಿಂದ ಹೊರ ಬಂದು ಹೋಗಲು ಯತ್ನಿಸಿದಾಗ ತಂಡೋಪ ತಂಡವಾಗಿ ಆನೆಗಳನ್ನು ನೋಡಲು ಬಂದ ಜನರ ಕಿರುಚಾಟದ ಸದ್ದನಿಂದ ಮತ್ತೇ ಆನೆಗಳು ಗದ್ದೆಯನ್ನು ಸೇರಿವೆ ಎನ್ನಲಾಗಿದೆ.

ಕಾಡಾನೆಗಳು ಆಹಾರ ಹುಡುಕುತ್ತಾ ಮುಳ್ಳೂರು ಬೆಟ್ಟದಿಂದ ಹೊಸ ಬಿರ್ವಾಳು ಕಡೆ ಬಂದಿವೆ. ಇವುಗಳನ್ನು ಕಾಡಿಗೆ ಓಡಿಸಲು ನಾವು ಮತ್ತು ನಮ್ಮ ಸಿಬ್ಬಂದಿ ಸಾಕಷ್ಟು ಪಯತ್ನ ಮಾಡಿದ್ದೇವೆ. ಆದರೆ ಸಾಕಷ್ಟು ಆನೆಗಳು ಕಾಡಿಗೆ ಹೋಗದೆ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ. ರಾತ್ರಿ ಜನರ ಸಂಖ್ಯೆ ಕಡಿಮೆ ಆದ ನಂತರ ಕಾಡಾನೆಗಳನ್ನು ಓಡಿಸಲು ಪ್ರಯತ್ನಿಸಲಾಗುವುದು.
ನಿವೇದಿತಾ, ವಲಯ ಅರಣ್ಯಾಧಿಕಾರಿ, ನುಗು ವನ್ಯಜೀವಿ ವಲಯ.

andolanait

Recent Posts

ಸಿಎಂ ಆಯ್ಕೆ ವೇಳೆ ಯಾವುದೇ ಗಡುವು ಕೊಟ್ಟಿಲ್ಲ: ಸಚಿವ ಕೆ.ಜೆ.ಜಾರ್ಜ್‌

ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ. ಸಿಎಂ ಬದಲಾವಣೆ…

41 mins ago

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ KERS ನಿರ್ದೇಶಕ ನೇತೃತ್ವದಲ್ಲಿ ತಂಡ ರಚನೆ

ಬೆಂಗಳೂರು: ಸುಪ್ರೀಂಕೋರ್ಟ್‌ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್‌ ಸಂಶೋಧನಾ ಕೇಂದ್ರ ನಿರ್ದೇಶಕರ…

1 hour ago

ಪಾರಂಪರಿಕ ನಗರ ಅಭಿವೃದ್ಧಿಗೆ ಕಾನೂನು ರೂಪಿಸಿ: ಸಂಸತ್‌ನಲ್ಲಿ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…

1 hour ago

ನನ್ನನ್ನು ಸಿಎಂ ಮಾಡುವುದಾದರೆ ಬಿಜೆಪಿಗೆ ವಾಪಸ್‌ ಹೋಗುತ್ತೇನೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್‌ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌…

2 hours ago

ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನಿಂದ ಹಿಟ್‌ ಅಂಡ್‌ ರನ್:‌ ಸವಾರ ಸಾವು

ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿರುವ…

3 hours ago

ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರ: ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ

ಮೈಸೂರು: ಯೂನಿಟಿ ಮಾಲ್‌ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…

3 hours ago