ಜಿಲ್ಲೆಗಳು

ಸರಗೂರು: ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಕಾಡಾನೆಗಳ ಹಿಂಡು

ಸರಗೂರು: ೫ ಕಾಡಾನೆಗಳ ಗುಂಪೊಂದು ಪ್ರತ್ಯೇಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ತಾಲ್ಲೂಕಿನ ನುಗು ಹಿನ್ನೀರು ಸಮೀಪ ಹೊಸಬಿರ್ವಾಳು ಗ್ರಾಮ ಹಾಗೂ ಮುಳ್ಳೂರು ಗ್ರಾಮದ ಹೊರವಯದಲ್ಲಿ ನಡೆದಿದೆ.
ತಾಲ್ಲೂಕು ಬಂಡೀಪುರ ವನ್ಯಜೀವಿ ವಲಯದಿಂದ ನುಗು ಜಲಾಶಯದ ಹಿನ್ನೀರಿನ ಮಾರ್ಗವಾಗಿ ಕಾಡಿನಿಂದ ಆಚೆ ಬಂದ ೫ ಕಾಡಾನೆಗಳ ಗುಂಪೊಂದು ಹೊಸಬಿರ್ವಾಳು ಮತ್ತು ಮುಳ್ಳುರು ಗ್ರಾಮದ ನಡುವಿನ ಬೆಟ್ಟದ ತಪ್ಪಲಿನ ಕಬ್ಬಿನ ಗದ್ದೆಯನ್ನು ಸೇರಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಬುಧವಾರ ಬೆಳಗ್ಗೆ ೭ ಗಂಟೆಗೆ ೫ ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ತಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳನ್ನು ಕಾಡಿಗೆ ಓಡಿಸಲು ಸಾಕಷ್ಟು ಶ್ರಮಿಸಿದಾದರೂ ಆನೆಗಳು ಪಕ್ಕದ ಕಬ್ಬಿನ ಗದ್ದೆಯನ್ನು ಸೇರಿಕೊಂಡಿವೆ.

ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟ ಕಾಡಾನೆಗಳು: ಕಾಡಿನಿಂದ ಹೊರಬಂದ ಆನೆಗಳ ಗುಂಪು ಕಬ್ಬಿನ ಗದ್ದೆಯನ್ನು ಸೇರಿ ರಾಗಿ ಇತರ ಬೆಳೆಗಳು ಸೇರಿದಂತೆ ಕಬ್ಬನ್ನು ಬೆಳೆಗಳನ್ನು ನಾಶ ಮಾಡಿವೆ ಎಂದು ರೈತರು ಆತಂಕ ಹೊರಹಾಕಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಅಧಿಕಾರಿಗಳು ಗನ್ ಹಿಡಿದು, ಪಟಾಕಿಗಳನ್ನು ಸಿಡಿಸಿ ಓಡಿಸಲು ಪ್ರಯತ್ನಿಸಿದ್ದಾರೂ ಎರಡು ಭಾರಿ ಆನೆಗಳು ಗದ್ದೆಯಿಂದ ಹೊರ ಬಂದು ಹೋಗಲು ಯತ್ನಿಸಿದಾಗ ತಂಡೋಪ ತಂಡವಾಗಿ ಆನೆಗಳನ್ನು ನೋಡಲು ಬಂದ ಜನರ ಕಿರುಚಾಟದ ಸದ್ದನಿಂದ ಮತ್ತೇ ಆನೆಗಳು ಗದ್ದೆಯನ್ನು ಸೇರಿವೆ ಎನ್ನಲಾಗಿದೆ.

ಕಾಡಾನೆಗಳು ಆಹಾರ ಹುಡುಕುತ್ತಾ ಮುಳ್ಳೂರು ಬೆಟ್ಟದಿಂದ ಹೊಸ ಬಿರ್ವಾಳು ಕಡೆ ಬಂದಿವೆ. ಇವುಗಳನ್ನು ಕಾಡಿಗೆ ಓಡಿಸಲು ನಾವು ಮತ್ತು ನಮ್ಮ ಸಿಬ್ಬಂದಿ ಸಾಕಷ್ಟು ಪಯತ್ನ ಮಾಡಿದ್ದೇವೆ. ಆದರೆ ಸಾಕಷ್ಟು ಆನೆಗಳು ಕಾಡಿಗೆ ಹೋಗದೆ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ. ರಾತ್ರಿ ಜನರ ಸಂಖ್ಯೆ ಕಡಿಮೆ ಆದ ನಂತರ ಕಾಡಾನೆಗಳನ್ನು ಓಡಿಸಲು ಪ್ರಯತ್ನಿಸಲಾಗುವುದು.
ನಿವೇದಿತಾ, ವಲಯ ಅರಣ್ಯಾಧಿಕಾರಿ, ನುಗು ವನ್ಯಜೀವಿ ವಲಯ.

andolanait

Recent Posts

ಅನುಮಾನಾಸ್ಪದವಾಗಿ ವ್ಯಕ್ತಿ ಸಾವು: ಮನೆ ಜಗುಲಿಯಲ್ಲೇ ಶವ ಪತ್ತೆ

ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…

5 mins ago

ಮೈಸೂರಿನಲ್ಲಿ ಫೆಬ್ರವರಿ.14ರಂದು ಹನುಮಾನ್ ಚಾಲೀಸಾ ಪಾರಾಯಣ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ.14ರಂದು ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮಿಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ.…

32 mins ago

ಎಚ್.ಡಿ.ಕೋಟೆ| ಸ್ಟೇಷನರಿ ಅಂಗಡಿಯಲ್ಲಿ ಬೆಂಕಿ: 15 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಎಚ್.ಡಿ.ಕೋಟೆ: ಶಾರ್ಟ್‌ ಸರ್ಕ್ಯೂಟ್‌ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಸುಮಾರು 25 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ…

1 hour ago

ಓದುಗರ ಪತ್ರ: ಕೊರಿಯನ್ ಗೇಮ್ಸ್ ನಿಷೇಧಿಸಿ

ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…

6 hours ago

ಓದುಗರ ಪತ್ರ: ಖಾಲಿ ನಿವೇಶನದಲ್ಲಿರುವ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…

6 hours ago

ಓದುಗರ ಪತ್ರ: ಬೆಳವಾಡಿ ಕೆರೆ ಸ್ವಚ್ಛಗೊಳಿಸಿ

ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…

6 hours ago