ಸರಗೂರು: ೫ ಕಾಡಾನೆಗಳ ಗುಂಪೊಂದು ಪ್ರತ್ಯೇಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ತಾಲ್ಲೂಕಿನ ನುಗು ಹಿನ್ನೀರು ಸಮೀಪ ಹೊಸಬಿರ್ವಾಳು ಗ್ರಾಮ ಹಾಗೂ ಮುಳ್ಳೂರು ಗ್ರಾಮದ ಹೊರವಯದಲ್ಲಿ ನಡೆದಿದೆ.
ತಾಲ್ಲೂಕು ಬಂಡೀಪುರ ವನ್ಯಜೀವಿ ವಲಯದಿಂದ ನುಗು ಜಲಾಶಯದ ಹಿನ್ನೀರಿನ ಮಾರ್ಗವಾಗಿ ಕಾಡಿನಿಂದ ಆಚೆ ಬಂದ ೫ ಕಾಡಾನೆಗಳ ಗುಂಪೊಂದು ಹೊಸಬಿರ್ವಾಳು ಮತ್ತು ಮುಳ್ಳುರು ಗ್ರಾಮದ ನಡುವಿನ ಬೆಟ್ಟದ ತಪ್ಪಲಿನ ಕಬ್ಬಿನ ಗದ್ದೆಯನ್ನು ಸೇರಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಬುಧವಾರ ಬೆಳಗ್ಗೆ ೭ ಗಂಟೆಗೆ ೫ ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ತಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳನ್ನು ಕಾಡಿಗೆ ಓಡಿಸಲು ಸಾಕಷ್ಟು ಶ್ರಮಿಸಿದಾದರೂ ಆನೆಗಳು ಪಕ್ಕದ ಕಬ್ಬಿನ ಗದ್ದೆಯನ್ನು ಸೇರಿಕೊಂಡಿವೆ.
ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟ ಕಾಡಾನೆಗಳು: ಕಾಡಿನಿಂದ ಹೊರಬಂದ ಆನೆಗಳ ಗುಂಪು ಕಬ್ಬಿನ ಗದ್ದೆಯನ್ನು ಸೇರಿ ರಾಗಿ ಇತರ ಬೆಳೆಗಳು ಸೇರಿದಂತೆ ಕಬ್ಬನ್ನು ಬೆಳೆಗಳನ್ನು ನಾಶ ಮಾಡಿವೆ ಎಂದು ರೈತರು ಆತಂಕ ಹೊರಹಾಕಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಅಧಿಕಾರಿಗಳು ಗನ್ ಹಿಡಿದು, ಪಟಾಕಿಗಳನ್ನು ಸಿಡಿಸಿ ಓಡಿಸಲು ಪ್ರಯತ್ನಿಸಿದ್ದಾರೂ ಎರಡು ಭಾರಿ ಆನೆಗಳು ಗದ್ದೆಯಿಂದ ಹೊರ ಬಂದು ಹೋಗಲು ಯತ್ನಿಸಿದಾಗ ತಂಡೋಪ ತಂಡವಾಗಿ ಆನೆಗಳನ್ನು ನೋಡಲು ಬಂದ ಜನರ ಕಿರುಚಾಟದ ಸದ್ದನಿಂದ ಮತ್ತೇ ಆನೆಗಳು ಗದ್ದೆಯನ್ನು ಸೇರಿವೆ ಎನ್ನಲಾಗಿದೆ.
ಕಾಡಾನೆಗಳು ಆಹಾರ ಹುಡುಕುತ್ತಾ ಮುಳ್ಳೂರು ಬೆಟ್ಟದಿಂದ ಹೊಸ ಬಿರ್ವಾಳು ಕಡೆ ಬಂದಿವೆ. ಇವುಗಳನ್ನು ಕಾಡಿಗೆ ಓಡಿಸಲು ನಾವು ಮತ್ತು ನಮ್ಮ ಸಿಬ್ಬಂದಿ ಸಾಕಷ್ಟು ಪಯತ್ನ ಮಾಡಿದ್ದೇವೆ. ಆದರೆ ಸಾಕಷ್ಟು ಆನೆಗಳು ಕಾಡಿಗೆ ಹೋಗದೆ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ. ರಾತ್ರಿ ಜನರ ಸಂಖ್ಯೆ ಕಡಿಮೆ ಆದ ನಂತರ ಕಾಡಾನೆಗಳನ್ನು ಓಡಿಸಲು ಪ್ರಯತ್ನಿಸಲಾಗುವುದು.
–ನಿವೇದಿತಾ, ವಲಯ ಅರಣ್ಯಾಧಿಕಾರಿ, ನುಗು ವನ್ಯಜೀವಿ ವಲಯ.
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…
ರೇಣುಕಾ ನಿಡಗುಂದಿ ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…
ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…