ಜಿಲ್ಲೆಗಳು

ಸರಗೂರು: ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಕಾಡಾನೆಗಳ ಹಿಂಡು

ಸರಗೂರು: ೫ ಕಾಡಾನೆಗಳ ಗುಂಪೊಂದು ಪ್ರತ್ಯೇಕ್ಷವಾಗಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ತಾಲ್ಲೂಕಿನ ನುಗು ಹಿನ್ನೀರು ಸಮೀಪ ಹೊಸಬಿರ್ವಾಳು ಗ್ರಾಮ ಹಾಗೂ ಮುಳ್ಳೂರು ಗ್ರಾಮದ ಹೊರವಯದಲ್ಲಿ ನಡೆದಿದೆ.
ತಾಲ್ಲೂಕು ಬಂಡೀಪುರ ವನ್ಯಜೀವಿ ವಲಯದಿಂದ ನುಗು ಜಲಾಶಯದ ಹಿನ್ನೀರಿನ ಮಾರ್ಗವಾಗಿ ಕಾಡಿನಿಂದ ಆಚೆ ಬಂದ ೫ ಕಾಡಾನೆಗಳ ಗುಂಪೊಂದು ಹೊಸಬಿರ್ವಾಳು ಮತ್ತು ಮುಳ್ಳುರು ಗ್ರಾಮದ ನಡುವಿನ ಬೆಟ್ಟದ ತಪ್ಪಲಿನ ಕಬ್ಬಿನ ಗದ್ದೆಯನ್ನು ಸೇರಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಬುಧವಾರ ಬೆಳಗ್ಗೆ ೭ ಗಂಟೆಗೆ ೫ ಆನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ಕೂಡಲೇ ಸ್ಥಳೀಯರು ಅರಣ್ಯ ಇಲಾಖೆಯ ಮಾಹಿತಿಯನ್ನು ನೀಡಿದ್ದಾರೆ. ಕೂಡಲೇ ಸ್ತಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಗಳನ್ನು ಕಾಡಿಗೆ ಓಡಿಸಲು ಸಾಕಷ್ಟು ಶ್ರಮಿಸಿದಾದರೂ ಆನೆಗಳು ಪಕ್ಕದ ಕಬ್ಬಿನ ಗದ್ದೆಯನ್ನು ಸೇರಿಕೊಂಡಿವೆ.

ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟ ಕಾಡಾನೆಗಳು: ಕಾಡಿನಿಂದ ಹೊರಬಂದ ಆನೆಗಳ ಗುಂಪು ಕಬ್ಬಿನ ಗದ್ದೆಯನ್ನು ಸೇರಿ ರಾಗಿ ಇತರ ಬೆಳೆಗಳು ಸೇರಿದಂತೆ ಕಬ್ಬನ್ನು ಬೆಳೆಗಳನ್ನು ನಾಶ ಮಾಡಿವೆ ಎಂದು ರೈತರು ಆತಂಕ ಹೊರಹಾಕಿದ್ದಾರೆ. ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಅಧಿಕಾರಿಗಳು ಗನ್ ಹಿಡಿದು, ಪಟಾಕಿಗಳನ್ನು ಸಿಡಿಸಿ ಓಡಿಸಲು ಪ್ರಯತ್ನಿಸಿದ್ದಾರೂ ಎರಡು ಭಾರಿ ಆನೆಗಳು ಗದ್ದೆಯಿಂದ ಹೊರ ಬಂದು ಹೋಗಲು ಯತ್ನಿಸಿದಾಗ ತಂಡೋಪ ತಂಡವಾಗಿ ಆನೆಗಳನ್ನು ನೋಡಲು ಬಂದ ಜನರ ಕಿರುಚಾಟದ ಸದ್ದನಿಂದ ಮತ್ತೇ ಆನೆಗಳು ಗದ್ದೆಯನ್ನು ಸೇರಿವೆ ಎನ್ನಲಾಗಿದೆ.

ಕಾಡಾನೆಗಳು ಆಹಾರ ಹುಡುಕುತ್ತಾ ಮುಳ್ಳೂರು ಬೆಟ್ಟದಿಂದ ಹೊಸ ಬಿರ್ವಾಳು ಕಡೆ ಬಂದಿವೆ. ಇವುಗಳನ್ನು ಕಾಡಿಗೆ ಓಡಿಸಲು ನಾವು ಮತ್ತು ನಮ್ಮ ಸಿಬ್ಬಂದಿ ಸಾಕಷ್ಟು ಪಯತ್ನ ಮಾಡಿದ್ದೇವೆ. ಆದರೆ ಸಾಕಷ್ಟು ಆನೆಗಳು ಕಾಡಿಗೆ ಹೋಗದೆ ಕಬ್ಬಿನ ಗದ್ದೆಯಲ್ಲಿ ಬೀಡು ಬಿಟ್ಟಿವೆ. ರಾತ್ರಿ ಜನರ ಸಂಖ್ಯೆ ಕಡಿಮೆ ಆದ ನಂತರ ಕಾಡಾನೆಗಳನ್ನು ಓಡಿಸಲು ಪ್ರಯತ್ನಿಸಲಾಗುವುದು.
ನಿವೇದಿತಾ, ವಲಯ ಅರಣ್ಯಾಧಿಕಾರಿ, ನುಗು ವನ್ಯಜೀವಿ ವಲಯ.

andolanait

Recent Posts

ಮಂಡ್ಯ | ಜೈಲಿನಲ್ಲಿ ದುಡ್ಡು ಕೊಟ್ಟರೆ ರಾಜಾತಿಥ್ಯ ಆರೋಪ ; ಕಾರಾಗೃಹದ ಅದೀಕ್ಷಕಿ ವರ್ಗಾವಣೆ

ಕಾರಾಗೃಹದ ಅಧೀಕ್ಷಕಿ ಎಂ.ಶಾಂತಮ್ಮ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಂಡ್ಯ: ವಿಚಾರಣಾಧೀನ ಕೈದಿ ಶ್ರೀರಂಗಪಟ್ಟಣ ಎಡಿಎಲ್‌ಆರ್ ಮೊಹಮದ್ ಹುಸೇನ್‌ಗೆ ಅನಧಿಕೃತ…

7 hours ago

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ನಿರ್ಮಾಣ : ಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : 26,000 ಕೋಟಿ ಸಾಲ ಪಡೆದು ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ ನಿರ್ಮಾಣವಾಗುತ್ತಿದೆ ಎಂದು…

8 hours ago

ಗೃಹಜ್ಯೋತಿ | ಮನೆ-ಮನೆ ಸಮೀಕ್ಷೆ ಅವಧಿ ಸೆಪ್ಟೆಂಬರ್‌ 30ರವರೆಗೆ ವಿಸ್ತರಣೆ

ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರವರೆಗೆ ವಿಸ್ತರಿಸಿದೆ. 2023ರ…

9 hours ago

ಮೈಸೂರು ದಸರಾ | ಸೆ.28 ರಿಂದ ಅ.5ರವರೆಗೆ ಯುವ ಸಂಭ್ರಮ

ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ…

10 hours ago

ಕಾವೇರಿ ಜಲವಿವಾದ: ಸೆ.15ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಸೆಪ್ಟೆಂಬರ್‌ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…

15 hours ago

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…

16 hours ago