ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.
ಸತೀಶ್ ಜಾರಕಿಹೊಳಿ ಅವರು ನ.೭ ರಂದು ಹಿಂದೂ ಎಂಬುದು ಕೆಟ್ಟ ಹಾಗೂ ಅಶ್ಲೀಲ ಶಬ್ದವಾಗಿದೆ ಎಂದು ಅವಹೇಳನÀಕಾರಿಯಾಗಿ ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರಗೊಂಡಿದೆ. ಇವರ ಹೇಳಿಕೆ ದೇಶದ ಹಿಂದೂಗಳ ಮನಸ್ಸಿಗೆ ನೋವುಂಟುಮಾಡಿದೆ ಎಂದು ಕಿಡಿಕಾರಿದರು.
ಸುಪ್ರೀಂಕೋರ್ಟ್ನ ಹಿಂದೂ ಪದದ ಬಗೆಗಿನ ಅಭಿಪ್ರಾಯವನ್ನು ಸತೀಶ್ ಜಾರಕಿಹೊಳಿ ಅವರ ಹೇಳಿಕೆ ವಿರೋಧಿಸಿದಂತೆ ಆಗಿದೆ. ಹಿಂದೂ ಎಂಬ ಪದವನ್ನು ಹೀಯಾಳಿಸಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿದರು.
ಇಂತಹ ಹೇಳಿಕೆಗಳ ಮೂಲಕ ರಾಜ್ಯ ಹಾಗೂ ದೇಶದ ಸಾಮರಸ್ಯ ಹಾಳು ಮಾಡಿ ವೈಯಕ್ತಿಕ ಲಾಭ ಪಡೆಯಲು ಮುಂದಾಗಿದ್ದಾರೆ. ಆದ್ದರಿಂದ ಕೂಡಲೇ ಸತೀಶ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾಡಾಧ್ಯಕ್ಷ ನಿಜಗುಣರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಉಪಾಧ್ಯಕ್ಷ ವೃಷಬೇಂದ್ರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀಪ್ರತಾಪ್, ನಾರಾಯಣ ಪ್ರಸಾದ್, ಮಂಗಲ ಶಿವಕುಮಾರ್, ನಗರಸಭಾಧ್ಯಕ್ಷೆ ಆಶಾ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚAದ್ರ, ಶಿವು ವಿರಾಟ್, ಸೂರ್ಯ, ನೂರೊಂದುಶೆಟ್ಟಿ, ಕೆಲ್ಲಂಬಳ್ಳಿ ಸೋಮನಾಯಕ, ಕೆ.ಆರ್.ಬಸವರಾಜು, ಮೂಡ್ಲುಪುರ ನಂದೀಶ್ ಇತರರಿದ್ದರು.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…