ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆ ನಡೆಸಿದರು.
ಸತೀಶ್ ಜಾರಕಿಹೊಳಿ ಅವರು ನ.೭ ರಂದು ಹಿಂದೂ ಎಂಬುದು ಕೆಟ್ಟ ಹಾಗೂ ಅಶ್ಲೀಲ ಶಬ್ದವಾಗಿದೆ ಎಂದು ಅವಹೇಳನÀಕಾರಿಯಾಗಿ ಮಾತನಾಡಿರುವುದು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರಗೊಂಡಿದೆ. ಇವರ ಹೇಳಿಕೆ ದೇಶದ ಹಿಂದೂಗಳ ಮನಸ್ಸಿಗೆ ನೋವುಂಟುಮಾಡಿದೆ ಎಂದು ಕಿಡಿಕಾರಿದರು.
ಸುಪ್ರೀಂಕೋರ್ಟ್ನ ಹಿಂದೂ ಪದದ ಬಗೆಗಿನ ಅಭಿಪ್ರಾಯವನ್ನು ಸತೀಶ್ ಜಾರಕಿಹೊಳಿ ಅವರ ಹೇಳಿಕೆ ವಿರೋಧಿಸಿದಂತೆ ಆಗಿದೆ. ಹಿಂದೂ ಎಂಬ ಪದವನ್ನು ಹೀಯಾಳಿಸಿ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟು ಮಾಡಿದ್ದಾರೆ ಎಂದು ಆರೋಪಿಸಿದರು.
ಇಂತಹ ಹೇಳಿಕೆಗಳ ಮೂಲಕ ರಾಜ್ಯ ಹಾಗೂ ದೇಶದ ಸಾಮರಸ್ಯ ಹಾಳು ಮಾಡಿ ವೈಯಕ್ತಿಕ ಲಾಭ ಪಡೆಯಲು ಮುಂದಾಗಿದ್ದಾರೆ. ಆದ್ದರಿಂದ ಕೂಡಲೇ ಸತೀಶ್ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕಾಡಾಧ್ಯಕ್ಷ ನಿಜಗುಣರಾಜು, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಸುಂದರ್, ಉಪಾಧ್ಯಕ್ಷ ವೃಷಬೇಂದ್ರಪ್ಪ, ಪ್ರಧಾನ ಕಾರ್ಯದರ್ಶಿಗಳಾದ ನಾಗಶ್ರೀಪ್ರತಾಪ್, ನಾರಾಯಣ ಪ್ರಸಾದ್, ಮಂಗಲ ಶಿವಕುಮಾರ್, ನಗರಸಭಾಧ್ಯಕ್ಷೆ ಆಶಾ, ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚAದ್ರ, ಶಿವು ವಿರಾಟ್, ಸೂರ್ಯ, ನೂರೊಂದುಶೆಟ್ಟಿ, ಕೆಲ್ಲಂಬಳ್ಳಿ ಸೋಮನಾಯಕ, ಕೆ.ಆರ್.ಬಸವರಾಜು, ಮೂಡ್ಲುಪುರ ನಂದೀಶ್ ಇತರರಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…