ಹುಣಸೂರು: ೨೦ ವರ್ಷಗಳಿಂದ ಕುಡಿಯಲು ನೀರಿನ ವ್ವವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದ ಸರ್ಕಾರಿ ಶಾಲೆಗೆ ಸ್ಥಳಿಯ ಸತ್ಯ ಎಂ.ಎ.ಎಸ್ .ಫೌಂಡೇಷನ್ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದೆ.
ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ೪೫೪ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಕಳೆದ ಇಪ್ಪತ್ತು ವರ್ಷಗಳಿಂದಲೂ ಈ ಶಾಲೆಗೆ ಪ್ರತ್ಯೇಕ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರು ಹಾಗೂ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂಧಿಗಳು ಪರದಾಡುತ್ತಿದ್ದರು.
ಈ ಶಾಲೆಗೆ, ಪಕ್ಕದ ಕಾಲೇಜಿನಿಂದ ನೀರು ಸರಬರಾಜಾಗುತ್ತಿದ್ದು, ಕಾಲೇಜಿಗೆ ರಜೆ ಇದ್ದರೆ ಪ್ರೌಢಶಾಲೆಯಲ್ಲಿ ನೀರೂ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಬಗ್ಗೆ ಮಕ್ಕಳ ಪೋಷಕರು ಸತ್ಯ ಎಂ. ಎ ಎಸ್ ಫೌಂಡೇಷನ್ ಗಮನಕ್ಕೆ ತಂದಿದ್ದರು.
ಸ್ಥಳಕ್ಕೆ ಹೋಗಿ ಅವ್ಯವಸ್ಥೆ ಯನ್ನು ಪರಿಶೀಲಿಸಿದ ಸತ್ಯಪ್ಪ ಅವರು ತಕ್ಷಣವೇ ಈ ಬಗ್ಗೆ ಪತ್ರಿಕೆಯ ಮುಖಾಂತರ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದಲ್ಲದೆ, ಮಾನ್ಯ
ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಶಿಕ್ಷಣ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದರು. ನಿರಂತರ ಹೋರಾಟ ಬಳಿಕ ಸ್ಥಳಿಯ ಶಾಸಕರು ತಕ್ಷಣವೇ ಸ್ಪಂದಿಸಿ ಶಾಲೆಗೆ ಪ್ರತ್ಯೇಕವಾಗಿ ಕೊಳವೆ ಬಾವಿ ಕೊರೆಸಿದ್ದಾರೆ.
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…
ಮೈಸೂರು : ರಾಮಕೃಷ್ಣ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಡಿ.30 ರ ಬದಲಿಗೆ 29ರಂದೇ ನಡೆಸಲಿರುವುದರಿಂದ…