ಜಿಲ್ಲೆಗಳು

ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ನೀರಿ ವ್ಯವಸ್ಥೆ ಕಲ್ಪಿಸಲು ನೆರವಾದ ಸತ್ಯ ಎಂ.ಎ.ಎಸ್‌ ಫೌಂಡೇಷನ್‌ !

ಹುಣಸೂರು: ೨೦ ವರ್ಷಗಳಿಂದ ಕುಡಿಯಲು ನೀರಿನ ವ್ವವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದ ಸರ್ಕಾರಿ ಶಾಲೆಗೆ ಸ್ಥಳಿಯ ಸತ್ಯ ಎಂ.ಎ.ಎಸ್‌ .ಫೌಂಡೇಷನ್‌ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದೆ.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ೪೫೪ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಕಳೆದ ಇಪ್ಪತ್ತು ವರ್ಷಗಳಿಂದಲೂ ಈ ಶಾಲೆಗೆ ಪ್ರತ್ಯೇಕ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರು ಹಾಗೂ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂಧಿಗಳು ಪರದಾಡುತ್ತಿದ್ದರು.

ಈ ಶಾಲೆಗೆ, ಪಕ್ಕದ ಕಾಲೇಜಿನಿಂದ ನೀರು ಸರಬರಾಜಾಗುತ್ತಿದ್ದು, ಕಾಲೇಜಿಗೆ ರಜೆ ಇದ್ದರೆ ಪ್ರೌಢಶಾಲೆಯಲ್ಲಿ ನೀರೂ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಬಗ್ಗೆ ಮಕ್ಕಳ ಪೋಷಕರು ಸತ್ಯ ಎಂ. ಎ ಎಸ್ ಫೌಂಡೇಷನ್ ಗಮನಕ್ಕೆ ತಂದಿದ್ದರು.

ಸ್ಥಳಕ್ಕೆ ಹೋಗಿ ಅವ್ಯವಸ್ಥೆ ಯನ್ನು ಪರಿಶೀಲಿಸಿದ ಸತ್ಯಪ್ಪ ಅವರು ತಕ್ಷಣವೇ ಈ ಬಗ್ಗೆ ಪತ್ರಿಕೆಯ ಮುಖಾಂತರ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದಲ್ಲದೆ, ಮಾನ್ಯ

ಮುಖ್ಯಮಂತ್ರಿಗಳು,  ಶಿಕ್ಷಣ ಸಚಿವರು, ಶಿಕ್ಷಣ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದರು. ನಿರಂತರ ಹೋರಾಟ ಬಳಿಕ ಸ್ಥಳಿಯ ಶಾಸಕರು ತಕ್ಷಣವೇ ಸ್ಪಂದಿಸಿ ಶಾಲೆಗೆ ಪ್ರತ್ಯೇಕವಾಗಿ ಕೊಳವೆ ಬಾವಿ ಕೊರೆಸಿದ್ದಾರೆ.

andolanait

Recent Posts

ಓದುಗರ ಪತ್ರ: ಗ್ರಂಥಾಲಯ ನಿರ್ಮಿಸಿ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…

6 mins ago

ಓದುಗರ ಪತ್ರ: ಪತ್ರಿಕಾ ವಿತರಕರಿಗೆ ಸೌಲಭ್ಯ ಕಲ್ಪಿಸಿ

ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…

8 mins ago

ಓದುಗರ ಪತ್ರ: ಸರ್ಕಾರಿ ಶಾಲೆಗಳನ್ನು ಉನ್ನತೀಕರಣಗೊಳಿಸಿ

ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…

11 mins ago

ಓದುಗರ ಪತ್ರ: ಭಾರತೀಯ ರಿಸರ್ವ್ ಬ್ಯಾಂಕಿನ ಕ್ರಮ ಸ್ವಾಗತಾರ್ಹ

ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…

13 mins ago

ಓದುಗರ ಪತ್ರ: ಸೆಸ್ಕ್ ಭೂಗತ ಕೇಬಲ್ ಅಳವಡಿಕೆ ಅವಾಂತರಗಳು

ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…

15 mins ago

ವಿವಿಗಳಲ್ಲಿ ಸಾಮಾಜಿಕ ನ್ಯಾಯ: ಸಂಕಟಗಳು – ಸವಾಲುಗಳು

 ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…

18 mins ago