ಜಿಲ್ಲೆಗಳು

ಸರ್ಕಾರಿ ಬಾಲಕಿಯರ ಪ್ರೌಢಶಾಲೆಗೆ ನೀರಿ ವ್ಯವಸ್ಥೆ ಕಲ್ಪಿಸಲು ನೆರವಾದ ಸತ್ಯ ಎಂ.ಎ.ಎಸ್‌ ಫೌಂಡೇಷನ್‌ !

ಹುಣಸೂರು: ೨೦ ವರ್ಷಗಳಿಂದ ಕುಡಿಯಲು ನೀರಿನ ವ್ವವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದ ಸರ್ಕಾರಿ ಶಾಲೆಗೆ ಸ್ಥಳಿಯ ಸತ್ಯ ಎಂ.ಎ.ಎಸ್‌ .ಫೌಂಡೇಷನ್‌ ಕುಡಿಯುವ ನೀರಿನ ವ್ಯವಸ್ಥೆ ಮಾಡುವ ಮೂಲಕ ಮಾನವೀಯತೆ ಮೆರೆದಿದೆ.

ನಗರದ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ೪೫೪ ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದು, ಕಳೆದ ಇಪ್ಪತ್ತು ವರ್ಷಗಳಿಂದಲೂ ಈ ಶಾಲೆಗೆ ಪ್ರತ್ಯೇಕ ನೀರಿನ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿನಿಯರು ಹಾಗೂ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂಧಿಗಳು ಪರದಾಡುತ್ತಿದ್ದರು.

ಈ ಶಾಲೆಗೆ, ಪಕ್ಕದ ಕಾಲೇಜಿನಿಂದ ನೀರು ಸರಬರಾಜಾಗುತ್ತಿದ್ದು, ಕಾಲೇಜಿಗೆ ರಜೆ ಇದ್ದರೆ ಪ್ರೌಢಶಾಲೆಯಲ್ಲಿ ನೀರೂ ಇಲ್ಲದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಈ ಬಗ್ಗೆ ಮಕ್ಕಳ ಪೋಷಕರು ಸತ್ಯ ಎಂ. ಎ ಎಸ್ ಫೌಂಡೇಷನ್ ಗಮನಕ್ಕೆ ತಂದಿದ್ದರು.

ಸ್ಥಳಕ್ಕೆ ಹೋಗಿ ಅವ್ಯವಸ್ಥೆ ಯನ್ನು ಪರಿಶೀಲಿಸಿದ ಸತ್ಯಪ್ಪ ಅವರು ತಕ್ಷಣವೇ ಈ ಬಗ್ಗೆ ಪತ್ರಿಕೆಯ ಮುಖಾಂತರ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದಲ್ಲದೆ, ಮಾನ್ಯ

ಮುಖ್ಯಮಂತ್ರಿಗಳು,  ಶಿಕ್ಷಣ ಸಚಿವರು, ಶಿಕ್ಷಣ ಅಧಿಕಾರಿಗಳಿಗೆ ನಿರಂತರವಾಗಿ ಮನವಿ ಸಲ್ಲಿಸುತ್ತಾ ಬಂದರು. ನಿರಂತರ ಹೋರಾಟ ಬಳಿಕ ಸ್ಥಳಿಯ ಶಾಸಕರು ತಕ್ಷಣವೇ ಸ್ಪಂದಿಸಿ ಶಾಲೆಗೆ ಪ್ರತ್ಯೇಕವಾಗಿ ಕೊಳವೆ ಬಾವಿ ಕೊರೆಸಿದ್ದಾರೆ.

andolanait

Recent Posts

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

4 seconds ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 mins ago

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

12 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

13 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

24 hours ago