ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಹಾಲು, ಬೆಣ್ಣೆ ಮಾತ್ರವಲ್ಲದೇ ಕೋಳಿ ರಕ್ತವನ್ನೂ ಹುತ್ತಕ್ಕೆ ಎರೆದು ಷಷ್ಠಿ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಮಂಗಳವಾರ ಆಚರಿಸಲಾಯಿತು.
ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮನೆಮಂದಿಯಲ್ಲಾ ಒಟ್ಟಾಗಿ ತೆರಳಿ ಹಾಲು, ಬೆಣ್ಣೆ ಮಿಶ್ರಿತ ಬಾಳೆಹಣ್ಣನ್ನು ಹುತ್ತದ ಕೋವಿಗೆ ಹಾಕಿ ಪೂಜೆ ಸಲ್ಲಿಸುತ್ತಿದ್ದುದು ಕಂಡುಬಂದಿತು.ಇದೇ ರೀತಿ ನಗರದ ಉಪ್ಪಾರ ಬಡಾವಣೆ, ಉತ್ತುವಳ್ಳಿ, ಮಲ್ಲಯ್ಯನಪುರ, ಯಡಪುರ, ಕೆ.ಕೆ.ಹುಂಡಿ, ಯಳಂದೂರಿನ ಗುಂಬಳ್ಳಿ ಮೊದಲಾದಕಡೆ ಪೂಜೆ ನಂತರ ಕೋಳಿಕೊಂದು ಅದರ ರಕ್ತವನ್ನು ಹುತ್ತದ ಬಾಯಿಗೆ ಹರಿಸಲಾಯಿತು. ಕೋಳಿಮೊಟ್ಟೆಯನ್ನೂ ಹುತ್ತದೊಳಕ್ಕೆ ಬಿಡಲಾಯಿತು.
ಬೆಳಗಿನ ಜಾವದಿಂದ ಮಧ್ಯಾಹ್ನದವರೆಗೂ ಈ ಆಚರಣೆ ನಡೆಯಿತು. ಗುಂಡ್ಲುಪೇಟೆಯ ಕೆಲವೆಡೆ ಸಪ್ಪೆವಡೆ, ತಂಬಿಟ್ಟು, ಪಂಚಾಮೃತ ಇತ್ಯಾದಿಯನ್ನು ಹುತ್ತದ ಮುಂದಿಟ್ಟು ನೈವೇದ್ಯ ,ಮಾಡಿರುವುದು ಗೋಚರಿಸಿತು.
ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…
ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…
ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…