ಮೈಸೂರು: ಹಿಂದೂ ಪದದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ಅತ್ಯಂತ ಖಂಡನೀಯವಾಗಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.
ಹಿಂದೂ ಧರ್ಮಕ್ಕೆ ಭಾರತದಲ್ಲಿ ತನ್ನದೇ ಆದ ಪರಂಪರೆ,ಇತಿಹಾಸವಿದೆ. ನಾನೊಬ್ಬ ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ಸುಪ್ರೀಂಕೋರ್ಟ್ ಹಿಂದೂ ಪದದ ವಿಚಾರದಲ್ಲಿ ತನ್ನದೇ ಆದ ಗೌರವವನ್ನು ಹೊಂದಿರುವುದನ್ನು ಉಲ್ಲೇಖಿಸಿದೆ. ಹೀಗಿದ್ದರೂ ಸತೀಶ್ ಜಾರಕಿಹೊಳಿ ಈ ರೀತಿ ಮಾತನ್ನಾಡಿರುವುದು ಸಹಿಸಲಾಗದು ಎಂದು ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಂಡಿಸುವುದಕ್ಕೆ ಸೀಮಿತವಾಗದೆ ಅವರನ್ನು ಪಕ್ಷದ ಹುದ್ದೆಯಿಂದ ತೆಗೆದುಹಾಕಿ, ಪಕ್ಷದಿಂದ ಅಮಾನತುಪಡಿಸಬೇಕು ಎಂದು ಒತ್ತಾಯಿಸಿದರು. ಮಾನವ ಬಂಧುತ್ವ ವೇದಿಕೆ ಮೂಲಕ ಸಮಾಜವನ್ನು ಸರಿಪಡಿಸುವ ದಾರಿಗೆ ಮುಂದಾಗುವ ಬದಲಿಗೆ ಜಾತ್ಯತೀತತೆ ಹೆಸರಿನಲ್ಲಿ ಹಿಂದೂತ್ವದ ವಿರುದ್ಧ,ಹಿಂದೂ ಪದದ ಬಗ್ಗೆ ಅಗೌರವ ತೋರಿರುವುದು ಸರಿಯಲ್ಲ. ಒಬ್ಬ ಜವಾವ್ದಾರಿಯುತ ನಾಯಕನಾಗಿ ನೀಡಿರುವ ಹೇಳಿಕೆ ನೋಡಿದರೆ ಅವರಲ್ಲಿ ಪ್ರಬುದ್ಧತೆಯ ಕೊರತೆ ಕಾಡುತ್ತಿದೆ ಎಂದು ಟೀಕಿಸಿದ್ದಾರೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಿಸಿದ ಟಯೋಟ ಕಾರು, ಪಿಸ್ತೂಲ್ ವಶ: ಎಸ್ಪಿ ಮಂಡ್ಯ : ನಗರದ ಹೊರವಲಯದ ಹೆದ್ದಾರಿಯಲ್ಲಿ ಜು.2ರ ಗುರುವಾರ…
ಚಿತ್ರೋದ್ಯಮಿಗಳೂ ಆಗಿರುವ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರನ್ನು ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿಯ ಪದಾಧಿಕಾರಿಗಳು ಮತ್ತು ಮಾಜಿ ಅಧ್ಯಕ್ಷರ…
ನಂಜನಗೂಡು : ಜಮೀನಿನ ಪೋಡಿ ಹಾಗೂ ದುರಸ್ತಿಪಡಿಸಲು ಲಂಚ ಪಡೆಯುತ್ತಿದ್ದ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ವರದಿಯಾಗಿದೆ. ತಾಲ್ಲೂಕಿನ…
ಶ್ರೀರಂಗಪಟ್ಟಣ : ಅನೈತಿಕ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಆಲಗೂಡು ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ರಾಮನಗರ: ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಮಂದಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಮಾದಾಪಟ್ಟಣ ಬಳಿ…