ಮೈಸೂರು: ಹಿಂದೂ ಪದದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿರುವ ಹೇಳಿಕೆಯು ಅತ್ಯಂತ ಖಂಡನೀಯವಾಗಿದ್ದು, ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಟಿ.ಎಸ್.ಶ್ರೀವತ್ಸ ಆಗ್ರಹಿಸಿದ್ದಾರೆ.
ಹಿಂದೂ ಧರ್ಮಕ್ಕೆ ಭಾರತದಲ್ಲಿ ತನ್ನದೇ ಆದ ಪರಂಪರೆ,ಇತಿಹಾಸವಿದೆ. ನಾನೊಬ್ಬ ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಯಿದೆ. ಸುಪ್ರೀಂಕೋರ್ಟ್ ಹಿಂದೂ ಪದದ ವಿಚಾರದಲ್ಲಿ ತನ್ನದೇ ಆದ ಗೌರವವನ್ನು ಹೊಂದಿರುವುದನ್ನು ಉಲ್ಲೇಖಿಸಿದೆ. ಹೀಗಿದ್ದರೂ ಸತೀಶ್ ಜಾರಕಿಹೊಳಿ ಈ ರೀತಿ ಮಾತನ್ನಾಡಿರುವುದು ಸಹಿಸಲಾಗದು ಎಂದು ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಹೇಳಿಕೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಖಂಡಿಸುವುದಕ್ಕೆ ಸೀಮಿತವಾಗದೆ ಅವರನ್ನು ಪಕ್ಷದ ಹುದ್ದೆಯಿಂದ ತೆಗೆದುಹಾಕಿ, ಪಕ್ಷದಿಂದ ಅಮಾನತುಪಡಿಸಬೇಕು ಎಂದು ಒತ್ತಾಯಿಸಿದರು. ಮಾನವ ಬಂಧುತ್ವ ವೇದಿಕೆ ಮೂಲಕ ಸಮಾಜವನ್ನು ಸರಿಪಡಿಸುವ ದಾರಿಗೆ ಮುಂದಾಗುವ ಬದಲಿಗೆ ಜಾತ್ಯತೀತತೆ ಹೆಸರಿನಲ್ಲಿ ಹಿಂದೂತ್ವದ ವಿರುದ್ಧ,ಹಿಂದೂ ಪದದ ಬಗ್ಗೆ ಅಗೌರವ ತೋರಿರುವುದು ಸರಿಯಲ್ಲ. ಒಬ್ಬ ಜವಾವ್ದಾರಿಯುತ ನಾಯಕನಾಗಿ ನೀಡಿರುವ ಹೇಳಿಕೆ ನೋಡಿದರೆ ಅವರಲ್ಲಿ ಪ್ರಬುದ್ಧತೆಯ ಕೊರತೆ ಕಾಡುತ್ತಿದೆ ಎಂದು ಟೀಕಿಸಿದ್ದಾರೆ.
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…