ಜಿಲ್ಲೆಗಳು

ಸುತ್ತೂರು ಜಾತ್ರೆ : ದಾಂಪತ್ಯಜೀವನಕ್ಕೆ ಕಾಲಿಟ್ಟ 100ಕ್ಕೂ ಅಧಿಕ ಜೋಡಿ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಾಡಿನ ಮಠಾಧೀಶರು,ಗಣ್ಯರ ಸಮ್ಮುಖದಲ್ಲಿ ದಾಂಪತ್ಯಜೀವನಕ್ಕೆ ಕಾಲಿರಿಸುವ ಮೂಲಕ ಸತಿ-ಪತಿಗಳಾದರು.
ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, ಹುಕ್ಕೇರಿ ಶ್ರೀಗುರುಕಾಂತೇಶ್ವರ ಸಂಸ್ಥಾನ ಹಿರೇಮಠ ಡಾ.ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ವಾಸವಿ ಮಠದ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಸಿ.ಪಾಟೀಲ್, ಉದ್ಯಮಿ ಎಸ್.ಎಸ್.ಗಣೇಶ್ ಮೊದಲಾದ ಹರಗುರುಗಳು, ಗಣ್ಯರ ಸಮ್ಮುಖದಲ್ಲಿ 114 ಜೋಡಿಗಳು ಮಾಂಗಲ್ಯಧಾರಣೆ ಬಳಿಕ ಪ್ರತಿಜ್ಞಾ ವಿಧಿಬೋಧಿಸಿದರು.


ಈ ಸಾಮೂಹಿಕ ವಿವಾಹದಲ್ಲಿ ಮಠದಿಂದ ನೂತನ ವಧು- ವರರಿಗೆ ಮಾಂಗಲ್ಯದೊಂದಿಗೆ ವಸ್ತ್ರವನ್ನು ನೀಡುವುದರೊಂದಿಗೆ ಬಾಗಿನ ನೀಡಲಾಯಿತು. ಸ್ವಾಮೀಜಿಗಳು, ಗಣ್ಯರು ತಾಳಿ ಇದ್ದ ತಟ್ಟೆಯನ್ನು ಸ್ಪರ್ಶಿಸಿ ಸ್ವಯಂ ಸೇವಕರಿಗೆ ನೀಡಿದರು. ನಂತರ ನಿಗದಿತ ಸ್ಥಳದಲ್ಲಿ ಕೂತಿದ್ದ ವಧುವರರಿಗೆ ಕೊಟ್ಟರು. ಅಮೇಲೆ ಗಣ್ಯರು ಅರಿಶಿನ ದಾರವಿದ್ದ ಮಾಂಗಲ್ಯವನ್ನುನೀಡಿ, ನೂತನ ವಧು- ವರರರಿಗೆ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರೆ, ಸಾಮೂಹಿಕ ವಿವಾಹವಾದ ಎಲ್ಲರಿಗೂ ಉಪ ನೊಂದಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ್ದ ಅಧಿಕಾರಿಗಳು ಸಾಂಕೇತಿಕವಾಗಿ ಐದು ನೂತನ ವಧು-ವರರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು.

ಎಲ್ಲರಿಗೂ ಬಾಗಿನ: ನೂತನ ವಧುವರರಿಗೆ ಬಸವೇಶ್ವರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಜೋಡಿಗಳಿಗೂ ಮಠದ ಪರವಾಗಿ ಬಾಗಿನ ನೀಡಿ ಸತ್ಕರಿಸಲಾಯಿತು. ಮಠದಿಂದಲೇ ಮೊರಕ್ಕೆ ಹಾಕಿದ್ದ ಬಾಗಿನದಲ್ಲಿ ವಸ್ತ್ರ,ಬಳೆ,ಅಕ್ಕಿ,ಅರಿಶಿಣಿ-ಕುಂಕುಮ,ಬಟ್ಟಲು ಇನ್ನಿತರ ವಸ್ತುಗಳು ಇದ್ದವು. ಬಾಗಿನ ಸ್ವೀಕಾರ ಮಾಡಿ ಹೊರ ಬಂದ ದಂಪತಿಗಳಿಗೆ ಕುಟುಂಬದವರು,ಸಂಬಂಧಿಕರು ಉಡುಗೊರೆಯನ್ನು ಕೊಟ್ಟು ಹಾರೈಸುತ್ತಿದ್ದು ಕಾಣಿಸಿತು.

andolanait

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

9 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

9 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

9 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

9 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

9 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

10 hours ago