ಜಿಲ್ಲೆಗಳು

ಸುತ್ತೂರು ಜಾತ್ರೆ : ದಾಂಪತ್ಯಜೀವನಕ್ಕೆ ಕಾಲಿಟ್ಟ 100ಕ್ಕೂ ಅಧಿಕ ಜೋಡಿ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಾಡಿನ ಮಠಾಧೀಶರು,ಗಣ್ಯರ ಸಮ್ಮುಖದಲ್ಲಿ ದಾಂಪತ್ಯಜೀವನಕ್ಕೆ ಕಾಲಿರಿಸುವ ಮೂಲಕ ಸತಿ-ಪತಿಗಳಾದರು.
ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, ಹುಕ್ಕೇರಿ ಶ್ರೀಗುರುಕಾಂತೇಶ್ವರ ಸಂಸ್ಥಾನ ಹಿರೇಮಠ ಡಾ.ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ವಾಸವಿ ಮಠದ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಸಿ.ಪಾಟೀಲ್, ಉದ್ಯಮಿ ಎಸ್.ಎಸ್.ಗಣೇಶ್ ಮೊದಲಾದ ಹರಗುರುಗಳು, ಗಣ್ಯರ ಸಮ್ಮುಖದಲ್ಲಿ 114 ಜೋಡಿಗಳು ಮಾಂಗಲ್ಯಧಾರಣೆ ಬಳಿಕ ಪ್ರತಿಜ್ಞಾ ವಿಧಿಬೋಧಿಸಿದರು.


ಈ ಸಾಮೂಹಿಕ ವಿವಾಹದಲ್ಲಿ ಮಠದಿಂದ ನೂತನ ವಧು- ವರರಿಗೆ ಮಾಂಗಲ್ಯದೊಂದಿಗೆ ವಸ್ತ್ರವನ್ನು ನೀಡುವುದರೊಂದಿಗೆ ಬಾಗಿನ ನೀಡಲಾಯಿತು. ಸ್ವಾಮೀಜಿಗಳು, ಗಣ್ಯರು ತಾಳಿ ಇದ್ದ ತಟ್ಟೆಯನ್ನು ಸ್ಪರ್ಶಿಸಿ ಸ್ವಯಂ ಸೇವಕರಿಗೆ ನೀಡಿದರು. ನಂತರ ನಿಗದಿತ ಸ್ಥಳದಲ್ಲಿ ಕೂತಿದ್ದ ವಧುವರರಿಗೆ ಕೊಟ್ಟರು. ಅಮೇಲೆ ಗಣ್ಯರು ಅರಿಶಿನ ದಾರವಿದ್ದ ಮಾಂಗಲ್ಯವನ್ನುನೀಡಿ, ನೂತನ ವಧು- ವರರರಿಗೆ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರೆ, ಸಾಮೂಹಿಕ ವಿವಾಹವಾದ ಎಲ್ಲರಿಗೂ ಉಪ ನೊಂದಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ್ದ ಅಧಿಕಾರಿಗಳು ಸಾಂಕೇತಿಕವಾಗಿ ಐದು ನೂತನ ವಧು-ವರರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು.

ಎಲ್ಲರಿಗೂ ಬಾಗಿನ: ನೂತನ ವಧುವರರಿಗೆ ಬಸವೇಶ್ವರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಜೋಡಿಗಳಿಗೂ ಮಠದ ಪರವಾಗಿ ಬಾಗಿನ ನೀಡಿ ಸತ್ಕರಿಸಲಾಯಿತು. ಮಠದಿಂದಲೇ ಮೊರಕ್ಕೆ ಹಾಕಿದ್ದ ಬಾಗಿನದಲ್ಲಿ ವಸ್ತ್ರ,ಬಳೆ,ಅಕ್ಕಿ,ಅರಿಶಿಣಿ-ಕುಂಕುಮ,ಬಟ್ಟಲು ಇನ್ನಿತರ ವಸ್ತುಗಳು ಇದ್ದವು. ಬಾಗಿನ ಸ್ವೀಕಾರ ಮಾಡಿ ಹೊರ ಬಂದ ದಂಪತಿಗಳಿಗೆ ಕುಟುಂಬದವರು,ಸಂಬಂಧಿಕರು ಉಡುಗೊರೆಯನ್ನು ಕೊಟ್ಟು ಹಾರೈಸುತ್ತಿದ್ದು ಕಾಣಿಸಿತು.

andolanait

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

7 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

7 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

8 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

8 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

10 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

10 hours ago