ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, ಹುಕ್ಕೇರಿ ಶ್ರೀಗುರುಕಾಂತೇಶ್ವರ ಸಂಸ್ಥಾನ ಹಿರೇಮಠ ಡಾ.ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ವಾಸವಿ ಮಠದ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಸಿ.ಪಾಟೀಲ್, ಉದ್ಯಮಿ ಎಸ್.ಎಸ್.ಗಣೇಶ್ ಮೊದಲಾದ ಹರಗುರುಗಳು, ಗಣ್ಯರ ಸಮ್ಮುಖದಲ್ಲಿ 114 ಜೋಡಿಗಳು ಮಾಂಗಲ್ಯಧಾರಣೆ ಬಳಿಕ ಪ್ರತಿಜ್ಞಾ ವಿಧಿಬೋಧಿಸಿದರು.
ಈ ಸಾಮೂಹಿಕ ವಿವಾಹದಲ್ಲಿ ಮಠದಿಂದ ನೂತನ ವಧು- ವರರಿಗೆ ಮಾಂಗಲ್ಯದೊಂದಿಗೆ ವಸ್ತ್ರವನ್ನು ನೀಡುವುದರೊಂದಿಗೆ ಬಾಗಿನ ನೀಡಲಾಯಿತು. ಸ್ವಾಮೀಜಿಗಳು, ಗಣ್ಯರು ತಾಳಿ ಇದ್ದ ತಟ್ಟೆಯನ್ನು ಸ್ಪರ್ಶಿಸಿ ಸ್ವಯಂ ಸೇವಕರಿಗೆ ನೀಡಿದರು. ನಂತರ ನಿಗದಿತ ಸ್ಥಳದಲ್ಲಿ ಕೂತಿದ್ದ ವಧುವರರಿಗೆ ಕೊಟ್ಟರು. ಅಮೇಲೆ ಗಣ್ಯರು ಅರಿಶಿನ ದಾರವಿದ್ದ ಮಾಂಗಲ್ಯವನ್ನುನೀಡಿ, ನೂತನ ವಧು- ವರರರಿಗೆ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರೆ, ಸಾಮೂಹಿಕ ವಿವಾಹವಾದ ಎಲ್ಲರಿಗೂ ಉಪ ನೊಂದಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ್ದ ಅಧಿಕಾರಿಗಳು ಸಾಂಕೇತಿಕವಾಗಿ ಐದು ನೂತನ ವಧು-ವರರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು.
ಎಲ್ಲರಿಗೂ ಬಾಗಿನ: ನೂತನ ವಧುವರರಿಗೆ ಬಸವೇಶ್ವರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಜೋಡಿಗಳಿಗೂ ಮಠದ ಪರವಾಗಿ ಬಾಗಿನ ನೀಡಿ ಸತ್ಕರಿಸಲಾಯಿತು. ಮಠದಿಂದಲೇ ಮೊರಕ್ಕೆ ಹಾಕಿದ್ದ ಬಾಗಿನದಲ್ಲಿ ವಸ್ತ್ರ,ಬಳೆ,ಅಕ್ಕಿ,ಅರಿಶಿಣಿ-ಕುಂಕುಮ,ಬಟ್ಟಲು ಇನ್ನಿತರ ವಸ್ತುಗಳು ಇದ್ದವು. ಬಾಗಿನ ಸ್ವೀಕಾರ ಮಾಡಿ ಹೊರ ಬಂದ ದಂಪತಿಗಳಿಗೆ ಕುಟುಂಬದವರು,ಸಂಬಂಧಿಕರು ಉಡುಗೊರೆಯನ್ನು ಕೊಟ್ಟು ಹಾರೈಸುತ್ತಿದ್ದು ಕಾಣಿಸಿತು.
ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…