ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, ಹುಕ್ಕೇರಿ ಶ್ರೀಗುರುಕಾಂತೇಶ್ವರ ಸಂಸ್ಥಾನ ಹಿರೇಮಠ ಡಾ.ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ವಾಸವಿ ಮಠದ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಸಿ.ಪಾಟೀಲ್, ಉದ್ಯಮಿ ಎಸ್.ಎಸ್.ಗಣೇಶ್ ಮೊದಲಾದ ಹರಗುರುಗಳು, ಗಣ್ಯರ ಸಮ್ಮುಖದಲ್ಲಿ 114 ಜೋಡಿಗಳು ಮಾಂಗಲ್ಯಧಾರಣೆ ಬಳಿಕ ಪ್ರತಿಜ್ಞಾ ವಿಧಿಬೋಧಿಸಿದರು.
ಈ ಸಾಮೂಹಿಕ ವಿವಾಹದಲ್ಲಿ ಮಠದಿಂದ ನೂತನ ವಧು- ವರರಿಗೆ ಮಾಂಗಲ್ಯದೊಂದಿಗೆ ವಸ್ತ್ರವನ್ನು ನೀಡುವುದರೊಂದಿಗೆ ಬಾಗಿನ ನೀಡಲಾಯಿತು. ಸ್ವಾಮೀಜಿಗಳು, ಗಣ್ಯರು ತಾಳಿ ಇದ್ದ ತಟ್ಟೆಯನ್ನು ಸ್ಪರ್ಶಿಸಿ ಸ್ವಯಂ ಸೇವಕರಿಗೆ ನೀಡಿದರು. ನಂತರ ನಿಗದಿತ ಸ್ಥಳದಲ್ಲಿ ಕೂತಿದ್ದ ವಧುವರರಿಗೆ ಕೊಟ್ಟರು. ಅಮೇಲೆ ಗಣ್ಯರು ಅರಿಶಿನ ದಾರವಿದ್ದ ಮಾಂಗಲ್ಯವನ್ನುನೀಡಿ, ನೂತನ ವಧು- ವರರರಿಗೆ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರೆ, ಸಾಮೂಹಿಕ ವಿವಾಹವಾದ ಎಲ್ಲರಿಗೂ ಉಪ ನೊಂದಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ್ದ ಅಧಿಕಾರಿಗಳು ಸಾಂಕೇತಿಕವಾಗಿ ಐದು ನೂತನ ವಧು-ವರರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು.
ಎಲ್ಲರಿಗೂ ಬಾಗಿನ: ನೂತನ ವಧುವರರಿಗೆ ಬಸವೇಶ್ವರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಜೋಡಿಗಳಿಗೂ ಮಠದ ಪರವಾಗಿ ಬಾಗಿನ ನೀಡಿ ಸತ್ಕರಿಸಲಾಯಿತು. ಮಠದಿಂದಲೇ ಮೊರಕ್ಕೆ ಹಾಕಿದ್ದ ಬಾಗಿನದಲ್ಲಿ ವಸ್ತ್ರ,ಬಳೆ,ಅಕ್ಕಿ,ಅರಿಶಿಣಿ-ಕುಂಕುಮ,ಬಟ್ಟಲು ಇನ್ನಿತರ ವಸ್ತುಗಳು ಇದ್ದವು. ಬಾಗಿನ ಸ್ವೀಕಾರ ಮಾಡಿ ಹೊರ ಬಂದ ದಂಪತಿಗಳಿಗೆ ಕುಟುಂಬದವರು,ಸಂಬಂಧಿಕರು ಉಡುಗೊರೆಯನ್ನು ಕೊಟ್ಟು ಹಾರೈಸುತ್ತಿದ್ದು ಕಾಣಿಸಿತು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…