ಜಿಲ್ಲೆಗಳು

ಸುತ್ತೂರು ಜಾತ್ರೆ : ದಾಂಪತ್ಯಜೀವನಕ್ಕೆ ಕಾಲಿಟ್ಟ 100ಕ್ಕೂ ಅಧಿಕ ಜೋಡಿ

ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ನಾಡಿನ ಮಠಾಧೀಶರು,ಗಣ್ಯರ ಸಮ್ಮುಖದಲ್ಲಿ ದಾಂಪತ್ಯಜೀವನಕ್ಕೆ ಕಾಲಿರಿಸುವ ಮೂಲಕ ಸತಿ-ಪತಿಗಳಾದರು.
ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, ಹುಕ್ಕೇರಿ ಶ್ರೀಗುರುಕಾಂತೇಶ್ವರ ಸಂಸ್ಥಾನ ಹಿರೇಮಠ ಡಾ.ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ವಾಸವಿ ಮಠದ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಸಿ.ಪಾಟೀಲ್, ಉದ್ಯಮಿ ಎಸ್.ಎಸ್.ಗಣೇಶ್ ಮೊದಲಾದ ಹರಗುರುಗಳು, ಗಣ್ಯರ ಸಮ್ಮುಖದಲ್ಲಿ 114 ಜೋಡಿಗಳು ಮಾಂಗಲ್ಯಧಾರಣೆ ಬಳಿಕ ಪ್ರತಿಜ್ಞಾ ವಿಧಿಬೋಧಿಸಿದರು.


ಈ ಸಾಮೂಹಿಕ ವಿವಾಹದಲ್ಲಿ ಮಠದಿಂದ ನೂತನ ವಧು- ವರರಿಗೆ ಮಾಂಗಲ್ಯದೊಂದಿಗೆ ವಸ್ತ್ರವನ್ನು ನೀಡುವುದರೊಂದಿಗೆ ಬಾಗಿನ ನೀಡಲಾಯಿತು. ಸ್ವಾಮೀಜಿಗಳು, ಗಣ್ಯರು ತಾಳಿ ಇದ್ದ ತಟ್ಟೆಯನ್ನು ಸ್ಪರ್ಶಿಸಿ ಸ್ವಯಂ ಸೇವಕರಿಗೆ ನೀಡಿದರು. ನಂತರ ನಿಗದಿತ ಸ್ಥಳದಲ್ಲಿ ಕೂತಿದ್ದ ವಧುವರರಿಗೆ ಕೊಟ್ಟರು. ಅಮೇಲೆ ಗಣ್ಯರು ಅರಿಶಿನ ದಾರವಿದ್ದ ಮಾಂಗಲ್ಯವನ್ನುನೀಡಿ, ನೂತನ ವಧು- ವರರರಿಗೆ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರೆ, ಸಾಮೂಹಿಕ ವಿವಾಹವಾದ ಎಲ್ಲರಿಗೂ ಉಪ ನೊಂದಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ್ದ ಅಧಿಕಾರಿಗಳು ಸಾಂಕೇತಿಕವಾಗಿ ಐದು ನೂತನ ವಧು-ವರರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು.

ಎಲ್ಲರಿಗೂ ಬಾಗಿನ: ನೂತನ ವಧುವರರಿಗೆ ಬಸವೇಶ್ವರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಜೋಡಿಗಳಿಗೂ ಮಠದ ಪರವಾಗಿ ಬಾಗಿನ ನೀಡಿ ಸತ್ಕರಿಸಲಾಯಿತು. ಮಠದಿಂದಲೇ ಮೊರಕ್ಕೆ ಹಾಕಿದ್ದ ಬಾಗಿನದಲ್ಲಿ ವಸ್ತ್ರ,ಬಳೆ,ಅಕ್ಕಿ,ಅರಿಶಿಣಿ-ಕುಂಕುಮ,ಬಟ್ಟಲು ಇನ್ನಿತರ ವಸ್ತುಗಳು ಇದ್ದವು. ಬಾಗಿನ ಸ್ವೀಕಾರ ಮಾಡಿ ಹೊರ ಬಂದ ದಂಪತಿಗಳಿಗೆ ಕುಟುಂಬದವರು,ಸಂಬಂಧಿಕರು ಉಡುಗೊರೆಯನ್ನು ಕೊಟ್ಟು ಹಾರೈಸುತ್ತಿದ್ದು ಕಾಣಿಸಿತು.

andolanait

Recent Posts

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

4 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

8 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

8 hours ago

ಗಾಂಧಿ ಮೈಮೇಲೆ ಬಂದಂತೆ ಬದುಕಿದ್ದ ಹುಚ್ಚೇಗೌಡರು

ಸ್ವಾಮಿ ಪೊನ್ನಾಚ್ಚಿ ನಾನು ಹುಚ್ಚೇಗೌಡರನ್ನು ನೋಡಿದ್ದು ಇತ್ತೀಚೆಗೆ. ಅದೂ ಅತ್ತಿಖಾನೆ ಎಸ್ಟೇಟ್ ಸ್ಥಾಪಕ ಮಾರಿಸ್ ಬಗ್ಗೆ ತಿಳಿಯಲು ಹೋದಾಗ. ಸಿಕ್ಕ…

8 hours ago

ವಿಲಾಯತಿಗೆ ಹೊರಟವನು ಜಾತಿ ಬಾಹಿರನಾದೆ

ನಮ್ಮ ಜಾತಿಯ ಜನರು ನನ್ನ ವಿದೇಶ ಪ್ರಯಾಣವನ್ನು ಕುರಿತು ಗೊಂದಲವನ್ನು ಎಬ್ಬಿಸಿದರು. ಅಲ್ಲಿಯವರೆಗೆ ಮೋಧ್ ಬನಿಯರ ಪೈಕಿ ಯಾರೂ ವಿಲಾಯತಿಗೆ…

8 hours ago