ಮೈಸೂರು: ಸುತ್ತೂರು ಜಾತ್ರಾ ಮಹೋತ್ಸವ ಅಂಗವಾಗಿ ಕಪಿಲಾ ನದಿತೀರದ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಗುರುವಾರ ಜರುಗಿದ ಸಾಮೂಹಿಕ ವಿವಾಹದಲ್ಲಿ ಸುಮಾರು 114 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸುತ್ತೂರು ಮಠದ ಶ್ರೀಶಿವರಾತ್ರಿದೇಶಿಕೇಂದ್ರಸ್ವಾಮೀಜಿ, ಹುಕ್ಕೇರಿ ಶ್ರೀಗುರುಕಾಂತೇಶ್ವರ ಸಂಸ್ಥಾನ ಹಿರೇಮಠ ಡಾ.ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಬೆಂಗಳೂರು ವಾಸವಿ ಮಠದ ಶ್ರೀಸಚ್ಚಿದಾನಂದ ಸರಸ್ವತಿ ಸ್ವಾಮೀಜಿ, ಸಚಿವರಾದ ಎಸ್.ಟಿ.ಸೋಮಶೇಖರ್, ಸಿ.ಸಿ.ಪಾಟೀಲ್, ಉದ್ಯಮಿ ಎಸ್.ಎಸ್.ಗಣೇಶ್ ಮೊದಲಾದ ಹರಗುರುಗಳು, ಗಣ್ಯರ ಸಮ್ಮುಖದಲ್ಲಿ 114 ಜೋಡಿಗಳು ಮಾಂಗಲ್ಯಧಾರಣೆ ಬಳಿಕ ಪ್ರತಿಜ್ಞಾ ವಿಧಿಬೋಧಿಸಿದರು.
ಈ ಸಾಮೂಹಿಕ ವಿವಾಹದಲ್ಲಿ ಮಠದಿಂದ ನೂತನ ವಧು- ವರರಿಗೆ ಮಾಂಗಲ್ಯದೊಂದಿಗೆ ವಸ್ತ್ರವನ್ನು ನೀಡುವುದರೊಂದಿಗೆ ಬಾಗಿನ ನೀಡಲಾಯಿತು. ಸ್ವಾಮೀಜಿಗಳು, ಗಣ್ಯರು ತಾಳಿ ಇದ್ದ ತಟ್ಟೆಯನ್ನು ಸ್ಪರ್ಶಿಸಿ ಸ್ವಯಂ ಸೇವಕರಿಗೆ ನೀಡಿದರು. ನಂತರ ನಿಗದಿತ ಸ್ಥಳದಲ್ಲಿ ಕೂತಿದ್ದ ವಧುವರರಿಗೆ ಕೊಟ್ಟರು. ಅಮೇಲೆ ಗಣ್ಯರು ಅರಿಶಿನ ದಾರವಿದ್ದ ಮಾಂಗಲ್ಯವನ್ನುನೀಡಿ, ನೂತನ ವಧು- ವರರರಿಗೆ ಶುಭ ಹಾರೈಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪ್ರತಿಜ್ಞಾವಿಧಿ ಬೋಧಿಸಿದರೆ, ಸಾಮೂಹಿಕ ವಿವಾಹವಾದ ಎಲ್ಲರಿಗೂ ಉಪ ನೊಂದಣಾಧಿಕಾರಿಗಳ ಕಚೇರಿಯಿಂದ ಆಗಮಿಸಿದ್ದ ಅಧಿಕಾರಿಗಳು ಸಾಂಕೇತಿಕವಾಗಿ ಐದು ನೂತನ ವಧು-ವರರಿಗೆ ನೋಂದಣಿ ಪ್ರಮಾಣ ಪತ್ರ ವಿತರಿಸಿದರು.
ಎಲ್ಲರಿಗೂ ಬಾಗಿನ: ನೂತನ ವಧುವರರಿಗೆ ಬಸವೇಶ್ವರ ವಿದ್ಯಾರ್ಥಿ ನಿಲಯದಲ್ಲಿ ವಿಶೇಷ ಊಟೋಪಚಾರದ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಜೋಡಿಗಳಿಗೂ ಮಠದ ಪರವಾಗಿ ಬಾಗಿನ ನೀಡಿ ಸತ್ಕರಿಸಲಾಯಿತು. ಮಠದಿಂದಲೇ ಮೊರಕ್ಕೆ ಹಾಕಿದ್ದ ಬಾಗಿನದಲ್ಲಿ ವಸ್ತ್ರ,ಬಳೆ,ಅಕ್ಕಿ,ಅರಿಶಿಣಿ-ಕುಂಕುಮ,ಬಟ್ಟಲು ಇನ್ನಿತರ ವಸ್ತುಗಳು ಇದ್ದವು. ಬಾಗಿನ ಸ್ವೀಕಾರ ಮಾಡಿ ಹೊರ ಬಂದ ದಂಪತಿಗಳಿಗೆ ಕುಟುಂಬದವರು,ಸಂಬಂಧಿಕರು ಉಡುಗೊರೆಯನ್ನು ಕೊಟ್ಟು ಹಾರೈಸುತ್ತಿದ್ದು ಕಾಣಿಸಿತು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…