ಜಿಲ್ಲೆಗಳು

ಸಾವರ್ಕರ್ ಅವರ ದೇಶಪ್ರೇಮ, ತತ್ವ ಆದರ್ಶಗಳು ಅನುಕರಣೀಯ : ಜನ ಧ್ವನಿ ಬಿ.ವೆಂಕಟೇಶ್

ಹನೂರು: ಬಾಲ್ಯದಿಂದಲೇ ಅಪಾರವಾದ ದೇಶಭಕ್ತಿಯನ್ನು ಹೊಂದಿದ್ದ ಸಾವರ್ಕರ್ ಅಂಥ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ದಿಸೆಯಲ್ಲಿ ಬಿಜೆಪಿ ಸಾವರ್ಕರ್ ರಥಯಾತ್ರೆಯನ್ನು ಕೈಗೊಂಡಿರುವುದು ಶ್ಲಾಘನೀಯ ವಿಚಾರ ಎಂದು ಬಿಜೆಪಿ ಜಿಲ್ಲಾ ಒಬಿ ಸಿ ಸಂಯೋಜಕ ಜನ ಧ್ವನಿ ಬಿ.ವೆಂಕಟೇಶ್ ಅಭಿಪ್ರಾಯಪಟ್ಟರು.

ತಾಲೂಕಿನ ಕೌದಳ್ಳಿ ಜಿಪಂ ಕ್ಷೇತ್ರಕ್ಕೆ ಆಗಮಿಸಿದ ಸಾವರ್ಕರ್ ರಥಯಾತ್ರೆಯನ್ನು ಜ್ಯೋತಿಪುರದಲ್ಲಿ ಸ್ವಾಗತಿಸಿ ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ಬ್ರಿಟಿಷರ ವಿರುದ್ಧ ಹೋರಾಡಿದ್ದಾರೆ. ಕೆಲವು ಮಹನೀಯರ ಪರಿಚಯ ಇಂದಿನ ಪೀಳಿಗೆಗೆ ಅತ್ಯವಶ್ಯಕವಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ. ಸಾವರ್ಕರ್ ಅವರ ದೇಶಪ್ರೇಮ, ತತ್ವ ಆದರ್ಶಗಳು ಅನುಕರಣೀಯ ಎಂದರು.

ಅದ್ದೂರಿ ಸ್ವಾಗತ : ಕೌದಳ್ಳಿ ಸಮೀಪದ ಜ್ಯೋತಿಪುರ ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಬಿ.ವೆಂಕಟೇಶ್ ನೇತೃತ್ವದಲ್ಲಿ ಸಾವರ್ಕರ್ ರಥಯಾತ್ರೆಯನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು.ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಬಿಜೆಪಿ ಹಾಗೂ ಕೇಸರಿ ಬಾವುಟ ಹಾಗೂ ಸಾರ್ವರ್ಕರ್ ಭಾವಚಿತ್ರವನ್ನು ಪ್ರದರ್ಶಿಸುತ್ತಾ, ಸಾರ್ವರ್ಕರ್ ಅವರ ಭಾವಚಿತ್ರಕ್ಕೆ ಹೂಮಳೆಗೈದು ಅಪಾರ ಸಂಖ್ಯೆಯ ಕಾರ್ಯಕರ್ತರು ರಥಯಾತ್ರೆಯನ್ನು ಬರಮಾಡಿಕೊಂಡರು.
ಮಳೆಯನ್ನೂ ಲೆಕ್ಕಿಸದ ಬಿಜೆಪಿಗರು: ಬಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಸೇರಿದಂತೆ ಅನೇಕರು ಮಳೆಯನ್ನು ಲೆಕ್ಕಿಸದೆ ಸಾರ್ವರ್ಕರ್ ಅವರ ಯಶೋಗಾಥೆಯನ್ನು ಸಾರುವ ಕುರಿತಾದ ವಿಡಿಯೋ ಸಂದೇಶವನ್ನು ಬೃಹತ್ ಪರದೆ ಮೂಲಕ ವೀಕ್ಷಿಸಿದರು. ಸ್ವತಹ ಬಿ.ವೆಂಕಟೇಶ್ ಅವರೇ ನೆರೆದಿದ್ದ ಕಾರ್ಯಕರ್ತರಿಗೆ ಉಪಹಾರವನ್ನು ಬಡಿಸುವ ಮೂಲಕ ಕಾರ್ಯಕರ್ತರ ಖುಷಿಯನ್ನು ದುಪ್ಪಟಗೊಳಿಸಿದರು.

ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷರಾದ ಜಯಸುಂದರ್, ಹನೂರು ಮಂಡಲ ಒಬಿಸಿ ಮೋರ್ಚಾ ಅಧ್ಯಕ್ಷರಾದ ಕೃಷ್ಣಪ್ಪ, ಮಹದೇಶ್ವರ ಮಂಡಲ ಮಹಿಳಾ ಅಧ್ಯಕ್ಷರಾದ ಮೀನಾ, ಹನೂರು ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷರಾದ ರಾಜೇಶ್, ಮಹದೇಶ್ವರ ಬೆಟ್ಟ ಯುವ ಮೋರ್ಚಾ ಅಧ್ಯಕ್ಷರಾದ ಚಂದ್ರು, ಕುರಟ್ಟಿ ಹೊಸೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಟರಾಜು, ಗ್ರಾಮ ಪಂಚಾಯತಿ ಸದಸ್ಯರುಗಳಾದ ವರಪ್ರಸಾದ್, ರಾಜಪ್ಪ, ಜಬಿವುಲ್ಲಾ, ಮಂಜು, ಸತ್ಯಗಾಲ ಉಮೇಶ್, ತಮ್ಮಯ್ಯ ಶೆಟ್ಟಿ, ಸಿಂಗನಲ್ಲೂರು ಮರಿಸ್ವಾಮಿ, ಮುಖಂಡರಾದ ಶಿವಪ್ಪ, ಕಾಮಗೆರೆ ಸುರೇಶ್, ಶಿವಣ್ಣ. ನಾಗರಾಜು, ಜಿನಕನಹಳ್ಳಿ ಮಹೇಶ್, ಪುಟ್ಟಸ್ವಾಮಿ, ಕೌದಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮಿತಿ ಸದಸ್ಯರಾದ ಸದಸ್ಯರು ಹಾಗೂ ಕೌದಳ್ಳಿ ಗ್ರಾಮಸ್ಥರು ಹಾಜರಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

4 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

5 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

6 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

8 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

9 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

10 hours ago