ಜಿಲ್ಲೆಗಳು

ಸಾವರ್ಕರ್ ರಥ ಯಾತ್ರೆಯಲ್ಲಿ ನೂರಾರು ಕಾರ್ಯಕರ್ತರು ಭಾಗಿ

ಮೈಸೂರು : ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ  ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಚಾಮರಾಜ ವಿಧಾನಸಭಾ ಕ್ಷೇತ್ರದ ಹೈವೇ ವೃತ್ತದಿಂದ ಯಾದಗಿರಿ, ಮಾತೃಮಂಡಳಿ, ಕೆ.ಡಿ.ರಸ್ತೆ, ಜೆ.ಸಿ.ರಸ್ತೆಯಲ್ಲಿ ಸಂಚರಿಸಿತು.


ರಥಯಾತ್ರೆಯೊಂದಿಗೆ ಚಾಮರಾಜ ಕ್ಷೇತ್ರದ ನೂರಾರು ಕಾರ್ಯಕರ್ತರು ಬೈಕ್ ನೊಂದಿಗೆ ಸಂಚರಿಸಿದರು.

ರಥಯಾತ್ರೆಯು ಚಾಮರಾಜ ಕ್ಷೇತ್ರದಲ್ಲಿ ಸಂಚಾರ ಪೂರ್ಣಗೊಳಿಸಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತನ್ನ ಸಂಚಾರವನ್ನು ಆರಂಭಿಸಿದೆ. ಇಂದಿನ ಯಾತ್ರೆಯಲ್ಲಿ ಶಾಸಕ ಎಲ್‌. ನಾಗೇಂದ್ರ ಸೇರಿದಂತೆ ಹಲವಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು.

ಆ.23 ರಂದು ಮಾಜಿ ಮುಖ್ಯಮಂತ್ರಿ ಬಿ.ಎಎಸ್‌.ಯಡಿಯೂರಪ್ಪ ಅವರು ಯಾತ್ರೆಗೆ ಚಾಲನೆ ನೀಡಿದ್ದರು. ಈ ಯಾತ್ರೆಯು ನಾಳೆಯು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ.

andolanait

Recent Posts

ಜಾತೀಯತೆ ತೊಲಗಲಿ : ಡಾ.ಯತೀಂದ್ರ ಸಿದ್ದರಾಮಯ್ಯ

ನಂಜನಗೂಡು : ಜಾತೀಯತೆ ಎಂಬುದು ಸಂಪೂರ್ಣವಾಗಿ ತೊಲಗಬೇಕು. ಎಲ್ಲ ಸಮುದಾಯದವರು ನಮ್ಮವರೇ ಎಂದು ತಿಳಿದಾಗ ಮಾತ್ರ ಜಾತೀಯತೆ ದೂರವಾಗಲು ಸಾಧ್ಯ…

3 hours ago

ರಂಗಾಯಣ | ಐದು ದಿನಗಳ ʼನಿರಂತರ ರಂಗ ಉತ್ಸವʼಕ್ಕೆ ತೆರೆ

ಮೈಸೂರು : ನಿರಂತರ ರಂಗ ತಂಡದ ‘ನಿರಂತರ ರಂಗ ಉತ್ಸವ-2025-26’ರ ಐದು ದಿನಗಳ ರಂಗೋತ್ಸವದ ಕೊನೆಯ ದಿನ ‘ಕೊಡಲ್ಲ ಅಂದ್ರೆ…

3 hours ago

ಭೀಕರ ಸರಣಿ ಅಪಘಾತ : ಇಬ್ಬರು ಸಾವು, 20ಕ್ಕೂ ಹೆಚ್ಚು ವಾಹನ ಹಾನಿ

ಬೆಂಗಳೂರು : ನಗರದ ಹೊರವಲಯದ ಆನೇಕಲ್‌ನಲ್ಲಿ ಭಾನುವಾರ ಭೀಕರ ಸರಣಿ ಅಪಘಾತವಾಗಿದೆ. ವೇಗವಾಗಿ ನುಗ್ಗಿ ಬಂದ ಬೃಹತ್ ಕಂಟೈನರ್ ಲಾರಿಯೊಂದು…

3 hours ago

ವಿದ್ಯಾವಂತರಲ್ಲಿ ಹೆಚ್ಚುತ್ತಿರುವ ಮೌಢ್ಯತೆ, ಕಂದಾಚಾರ : ಸಿಎಂ ವಿಷಾದ

ಮಂಡ್ಯ : ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು…

3 hours ago

ವಸ್ತುಪ್ರದರ್ಶನದಲ್ಲಿ ಜನಾಕರ್ಷಿಸಿದ ಚಿತ್ರ ಸಂತೆ

ಮೈಸೂರು : ನಗರದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಲಲಿತ ಕಲೆ ಮತ್ತು ಕರಕುಶಲ ಹಾಗೂ ಮಹಿಳಾ ಉದ್ದಿಮೆ ಉಪ…

3 hours ago

ಬಂಧನದ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕನಿಗೆ ಲುಕ್‌ಔಟ್‌ ನೋಟಿಸ್‌ ಜಾರಿ

ಬೆಂಗಳೂರು : ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಬಿಜೆಪಿ ಶಾಸಕ ಬೈರತಿ ಬಸವರಾಜು, ಕಳೆದೆರಡು…

3 hours ago