ಜಿಲ್ಲೆಗಳು

ನಾಳೆಯಿಂದ 3 ಜಿಲ್ಲೆಗಳಲ್ಲಿ ಸಾವರ್ಕರ್ ರಥಯಾತ್ರೆ : ಯಶಸ್ವಿನಿ

ಮೈಸೂರು: ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆ.೨೩ರಿಂದ ೩೦ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಸಾವರ್ಕರ್ ರಥಯಾತ್ರೆ’ ಆಯೋಜಿಸಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘದ ಅಧ್ಯಕ್ಷರಾದ ಯಶಸ್ವಿನಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.೨೩ರಂದು ಬೆಳಿಗ್ಗೆ ೧೧ಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಹೊರಡುವ ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವರು. ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಥಯಾತ್ರೆ ಸಂಚರಿಸಲಿದೆ ಎಂದರು.

ಆ.೨೪ರಂದು ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.

ರಥಯಾತ್ರೆ ಸಂಯೋಜಕ ರಜತ್, ಸಂಘದ ಪದಾಧಿಕಾರಿಗಳಾದ ರಾಕೇಶ್ ಭಟ್, ಶಿವಕುಮಾರ್, ನಿಶಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

10 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago