ಜಿಲ್ಲೆಗಳು

ನಾಳೆಯಿಂದ 3 ಜಿಲ್ಲೆಗಳಲ್ಲಿ ಸಾವರ್ಕರ್ ರಥಯಾತ್ರೆ : ಯಶಸ್ವಿನಿ

ಮೈಸೂರು: ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆ.೨೩ರಿಂದ ೩೦ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಸಾವರ್ಕರ್ ರಥಯಾತ್ರೆ’ ಆಯೋಜಿಸಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘದ ಅಧ್ಯಕ್ಷರಾದ ಯಶಸ್ವಿನಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.೨೩ರಂದು ಬೆಳಿಗ್ಗೆ ೧೧ಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಹೊರಡುವ ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವರು. ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಥಯಾತ್ರೆ ಸಂಚರಿಸಲಿದೆ ಎಂದರು.

ಆ.೨೪ರಂದು ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.

ರಥಯಾತ್ರೆ ಸಂಯೋಜಕ ರಜತ್, ಸಂಘದ ಪದಾಧಿಕಾರಿಗಳಾದ ರಾಕೇಶ್ ಭಟ್, ಶಿವಕುಮಾರ್, ನಿಶಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

58 mins ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

1 hour ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

4 hours ago

ಓದುಗರ ಪತ್ರ: ಮಾದಾಪುರ ಪ್ರೌಢಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನು ನೇಮಿಸಿ

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇಂಗ್ಲಿಷ್ ಶಿಕ್ಷಕರು ಇಲ್ಲದೆ ವಿದ್ಯಾರ್ಥಿಗಳು ಈ ಪ್ರೌಢಶಾಲೆಗೆ ಸೇರಲು ಹಿಂದೇಟು ಹಾಕುತ್ತಿದ್ದಾರೆ.…

10 hours ago

ಓದುಗರ ಪತ್ರ: ದೇವೇಗೌಡರ ಹಿಂದಿನ ಶಕ್ತಿ ಚನ್ನಮ್ಮ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಪತ್ನಿ ಚನ್ನಮ್ಮ ನವರು ಅವರ ರಾಜಕೀಯ ಜೀವನದಲ್ಲಿ ದೊಡ್ಡ ಶಕ್ತಿಯಾಗಿ ನಿಂತಿದ್ದರು. ಅಂದು ತಮ್ಮ…

10 hours ago

ಓದುಗರ ಪತ್ರ: ಆನ್‌ಲೈನ್ ಕಾರ್ಯಭಾರದಿಂದ ಶಿಕ್ಷಕರಿಗೆ ಮುಕ್ತಿ ನೀಡಿ

ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ವೈಯಕ್ತಿಕ ಮೊಬೈಲ್ ಹಾಗೂ ಇಂಟರ್ನೆಟ್ ಬಳಸಿ ಇಲಾಖೆಯ ಆನ್‌ಲೈನ್ ಕೆಲಸಗಳನ್ನು ನಿರ್ವಹಿಸುತ್ತಿರುವುದು ಮತ್ತು ಕಚೇರಿ…

10 hours ago