ಜಿಲ್ಲೆಗಳು

ನಾಳೆಯಿಂದ 3 ಜಿಲ್ಲೆಗಳಲ್ಲಿ ಸಾವರ್ಕರ್ ರಥಯಾತ್ರೆ : ಯಶಸ್ವಿನಿ

ಮೈಸೂರು: ಆರ್‌ಎಸ್‌ಎಸ್‌ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಆ.೨೩ರಿಂದ ೩೦ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ‘ಸಾವರ್ಕರ್ ರಥಯಾತ್ರೆ’ ಆಯೋಜಿಸಲಾಗಿದೆ ಎಂದು ಸಾವರ್ಕರ್ ಪ್ರತಿಷ್ಠಾನ ಮೈಸೂರು ಸಂಘದ ಅಧ್ಯಕ್ಷರಾದ ಯಶಸ್ವಿನಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ.೨೩ರಂದು ಬೆಳಿಗ್ಗೆ ೧೧ಕ್ಕೆ ನಗರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಹೊರಡುವ ರಥಯಾತ್ರೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡುವರು. ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ರಥಯಾತ್ರೆ ಸಂಚರಿಸಲಿದೆ ಎಂದರು.

ಆ.೨೪ರಂದು ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.

ರಥಯಾತ್ರೆ ಸಂಯೋಜಕ ರಜತ್, ಸಂಘದ ಪದಾಧಿಕಾರಿಗಳಾದ ರಾಕೇಶ್ ಭಟ್, ಶಿವಕುಮಾರ್, ನಿಶಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

22 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago