ಮೈಸೂರು : ಆರ್ಎಸ್ಎಸ್ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು.
ಸಾವರ್ಕರ್ ಅವರ ಬಗ್ಗೆ, ಅವರ ದೇಶಭಕ್ತಿ, ಹೋರಾಟಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೀರ್ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಗಿದ್ದು, ಯಾತ್ರೆಯು ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚಾರ ಮಾಡಲಿದೆ.
ಆ.24 ರ ನಾಳೆ ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ.
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಪ್ರಕರಣವನ್ನು ಕೈಬಿಡುವಂತೆ ಕೋರಿ, ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ…
ಟಿ.ನರಸೀಪುರ: ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ತಲಕಾಡು ಪೊಲೀಸ್ ಠಾಣೆ ವ್ಯಾಪ್ತಿಯ…
ಮೈಸೂರು: ಮೈಸೂರು ನಗರದ ಸಿಸಿಬಿ ಪೊಲೀಸರು ಇಂದು ಮಾದಕ ವಸ್ತುಗಳ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…
ಮಂಡ್ಯ: ಮಕ್ಕಳು ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಹಾಗೂ ಕರ್ನಾಟಕ ರಾಜ್ಯ…
ಮೈಸೂರು: ಶಾಸಕರ ವಿದೇಶಿ ಪ್ರವಾಸಕ್ಕೂ ರಾಜಕೀಯ ಬೆಳವಣಿಗೆಗಳಿಗೂ ಸಂಬಂಧವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು.…
ಬೆಂಗಳೂರು: ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತ ತಲುಪಿದ್ದು, ವಿಶೇಷ ತನಿಖಾ ತಂಡ ತನಿಖೆಯನ್ನು ಪೂರ್ಣಗೊಳಿಸಿ ವರದಿ…