ಮೈಸೂರು : ಆರ್ಎಸ್ಎಸ್ನ ಸಾವರ್ಕರ್ ಜೀವನ ಚರಿತ್ರೆ ಮತ್ತು ಹೋರಾಟವನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಇಂದಿನಿಂದ ಆ. 30ರ ವರೆಗೆ ಮೈಸೂರು-ಮಂಡ್ಯ-ಚಾಮರಾಜನಗರ ಜಿಲ್ಲೆಗಳ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಹಮ್ಮಿಕೊಂಡಿರುವ ‘ಸಾವರ್ಕರ್ ರಥಯಾತ್ರೆ’ಯನ್ನು ಇಂದು ಮೈಸೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉದ್ಘಾಟಿಸಿದರು.
ಸಾವರ್ಕರ್ ಅವರ ಬಗ್ಗೆ, ಅವರ ದೇಶಭಕ್ತಿ, ಹೋರಾಟಗಳ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವೀರ್ ಸಾವರ್ಕರ್ ಪ್ರತಿಷ್ಠಾನದ ವತಿಯಿಂದ ಆಯೋಜಿಸಗಿದ್ದು, ಯಾತ್ರೆಯು ಟೆರಿಷಿಯನ್ ಕಾಲೇಜು ಮಾರ್ಗವಾಗಿ ಕ್ಯಾತಮಾರನಹಳ್ಳಿ, ತಿಲಕನಗರ, ಮಾತೃ ಮಂಡಳಿ ವೃತ್ತ, ಟೆಂಟ್ ವೃತ್ತ, ವಿವೇಕಾನಂದ ನಗರ, ಚಾಮುಂಡಿಪುರಂ ವೃತ್ತ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸಂಚಾರ ಮಾಡಲಿದೆ.
ಆ.24 ರ ನಾಳೆ ಮೈಸೂರು ಜಿಲ್ಲೆಯ ಜಯಪುರ, ಹಂಪಾಪುರ, ಎಚ್.ಡಿ.ಕೋಟೆ, ಸರಗೂರು ಭಾಗಗಳಲ್ಲಿ ರಥಯಾತ್ರೆ ನಡೆಯಲಿದೆ. ಆ.೨೫ರಂದು ನಂಜನಗೂಡು, ಬೇಗೂರು, ಗುಂಡ್ಲುಪೇಟೆ, ತೆರಕಣಾಂಬಿ. ಆ.೨೬ರಂದು ಚಾಮರಾಜನಗರ, ಸಂತೇಮರಹಳ್ಳಿ, ಯಳಂದೂರು, ಕೊಳ್ಳೇಗಾಲ, ಹನೂರು, ಕೌದಳ್ಳಿ. ಆ.೨೭ರಂದು ತಿ.ನರಸೀಪುರ, ಬನ್ನೂರು, ಕಿರುಗಾವಲು, ಮಳವಳ್ಳಿ, ಹಲಗೂರು, ಕೆ.ಎಂ.ದೊಡ್ಡಿ, ಮದ್ದೂರು, ಬೇಸಗರಹಳ್ಳಿ. ಆ.೨೮ರಂದು ಕೊಪ್ಪ, ಮಂಡ್ಯ, ಶ್ರೀರಂಗಪಟ್ಟಣ, ಪಾಂಡವಪುರ. ಆ.೨೯ರಂದು ಕಿಕ್ಕೇರಿ, ಕೆ.ಆರ್.ಪೇಟೆ, ಸಾಲಿಗ್ರಾಮ, ಪಿರಿಯಾಪಟ್ಟಣದಲ್ಲಿ ರಥಯಾತ್ರೆ ನಡೆಯಲಿದ್ದು, ಆ.೩೦ರಂದು ಹುಣಸೂರು ಮಾರ್ಗವಾಗಿ ಮೈಸೂರಿಗೆ ಹಿಂದಿರುಗಲಿದೆ. ಬಳಿಕ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಮಾರೋಪ ಸಮಾರಂಭ ಜರುಗಲಿದೆ.
ಬೆಂಗಳೂರು : ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ನಿರ್ಧಾರದಂತೆ, ಇಂದಿನಿಂದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ನಗದು…
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…