ಜಿಲ್ಲೆಗಳು

ಎಸ್ಸಿ, ಎಸ್ಟಿ ಹಿತರಕ್ಷಣಾ ಸಭೆ : ಸಮಸ್ಯೆ ಆಲಿಸಬೇಕಾದ ಅಧಿಕಾರಿಗಳೇ ಗೈರು!

ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯನ್ನು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು.
ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಗೈರಾಗುತ್ತಿದ್ದಾರೆ, ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ಹಾಕಬೇಕು ಎಂದು ಎಸ್ಸಿ ಎಸ್ಟಿ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.
ತಹಸಿಲ್ದಾರ್ ರವಿಶಂಕರ್ ಮಾತನಾಡಿ, ಯಾರು ಕಳೆದ ಎರಡು ಸಭೆಗಳಿಗೆ ಬಾರದೆ ನಿರ್ಲಕ್ಷ್ಯ ಮಾಡಿದ್ದಾರೋ ಅವರ ಮೇಲೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು.
ಮುದ್ರಾ ಯೋಜನೆಯಲ್ಲಿ ಸಾಲ ಸೌಲಭ್ಯ ನೀಡುತ್ತಿಲ್ಲ, ಕೃಷಿ ಇಲಾಖೆಯಲ್ಲಿ ಎಸ್ಸಿ ಎಸ್ಟಿ ಯವರಿಗೆ ಸಮರ್ಪಕವಾಗಿ ಪವರ್ ಟಿಲ್ಲರ್ ನೀಡುತ್ತಿಲ್ಲ ಎಂಬ ದೂರುಗಳು ಕೇಳಿಬಂದವು. ಇದೇ ರೀತಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ತಹಸಿಲ್ದಾರ್ ರವಿಶಂಕರ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಬಿಇಒ ಶಿವಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಹೇಮಂತ್ ರಾಜ್, ವೃತ್ತನಿರೀಕ್ಷಕ ಮುದ್ದುರಾಜ್, ಬಸವರಾಜು, ಪುರಸಭೆ ಸದಸ್ಯರಾದ ಅಣ್ಣ್ಂಯುಸ್ವಾಮಿ, ಶ್ರೀನಿವಾಸ್, ಸಿದ್ದಯ್ಯ, ಮಾಡ್ರಹಳ್ಳಿ ಸುಭಾಷ್, ಸೋಮಣ್ಣ , ರಂಗಸ್ವಾಮಿ, ನಾಗೇಂದ್ರ, ಮುತ್ತಣ್ಣ, ಎಸ್ಸಿ, ಎಸ್ಟಿ ಮುಖಂಡರು ಹಾಜರಿದ್ದರು.

andolanait

Recent Posts

ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಆಗ್ರಹ

ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ  ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…

1 min ago

ಕೊಡಗಿನಲ್ಲಿ ಶೇ.80ರಷ್ಟು ಭತ್ತ ಕಟಾವು ಕಾರ್ಯ ಪೂರ್ಣ

ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…

6 mins ago

ಮಳೆಯಿಂದ ತಗ್ಗಿದ ಚಳಿ, ಒಕ್ಕಣೆಗೆ ಪರದಾಟ!

ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…

9 mins ago

ಚುಂಚನಕಟ್ಟೆ: ಕಣ್ಮನ ಸೆಳೆಯುತ್ತಿರುವ ಜಾನುವಾರು ಜಾತ್ರೆ

ಆನಂದ್‌ ಹೊಸೂರು  ೪ ರಿಂದ ೬ ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಆಕರ್ಷಣೆ; ರೈತರ ಸಂಭ್ರಮ ಹೊಸೂರು:…

13 mins ago

‘ಕಸದ ಆಗರವಾಗಿರುವ ಆರೋಗ್ಯ ಕೇಂದ್ರದ ಆವರಣ’

ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ  ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ…

17 mins ago

ಚುನಾವಣಾ ರಾಜಕೀಯ ಬಿಟ್ಟ ಬಿಜೆಪಿ ಕಟ್ಟಾಳು!

ಕೆ.ಬಿ.ರಮೇಶನಾಯಕ ಮೈಸೂರು: ಹಳೆಯ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ -ಜನತಾ ಪರಿವಾರದ ಭದ್ರಕೋಟೆಯ ನಡುವೆಯೂ ಕೃಷ್ಣರಾಜ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವಂತೆ…

23 mins ago