ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯನ್ನು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು.
ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಗೈರಾಗುತ್ತಿದ್ದಾರೆ, ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಎಫ್ಐಆರ್ ಹಾಕಬೇಕು ಎಂದು ಎಸ್ಸಿ ಎಸ್ಟಿ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.
ತಹಸಿಲ್ದಾರ್ ರವಿಶಂಕರ್ ಮಾತನಾಡಿ, ಯಾರು ಕಳೆದ ಎರಡು ಸಭೆಗಳಿಗೆ ಬಾರದೆ ನಿರ್ಲಕ್ಷ್ಯ ಮಾಡಿದ್ದಾರೋ ಅವರ ಮೇಲೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆಯಲಾಗುವುದು ಎಂದರು.
ಮುದ್ರಾ ಯೋಜನೆಯಲ್ಲಿ ಸಾಲ ಸೌಲಭ್ಯ ನೀಡುತ್ತಿಲ್ಲ, ಕೃಷಿ ಇಲಾಖೆಯಲ್ಲಿ ಎಸ್ಸಿ ಎಸ್ಟಿ ಯವರಿಗೆ ಸಮರ್ಪಕವಾಗಿ ಪವರ್ ಟಿಲ್ಲರ್ ನೀಡುತ್ತಿಲ್ಲ ಎಂಬ ದೂರುಗಳು ಕೇಳಿಬಂದವು. ಇದೇ ರೀತಿ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.
ತಹಸಿಲ್ದಾರ್ ರವಿಶಂಕರ್, ಪುರಸಭೆ ಅಧ್ಯಕ್ಷ ಪಿ.ಗಿರೀಶ್, ಉಪಾಧ್ಯಕ್ಷರಾದ ದೀಪಿಕಾ ಅಶ್ವಿನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಬಿಇಒ ಶಿವಮೂರ್ತಿ, ಪುರಸಭೆ ಮುಖ್ಯಾಧಿಕಾರಿ ಹೇಮಂತ್ ರಾಜ್, ವೃತ್ತನಿರೀಕ್ಷಕ ಮುದ್ದುರಾಜ್, ಬಸವರಾಜು, ಪುರಸಭೆ ಸದಸ್ಯರಾದ ಅಣ್ಣ್ಂಯುಸ್ವಾಮಿ, ಶ್ರೀನಿವಾಸ್, ಸಿದ್ದಯ್ಯ, ಮಾಡ್ರಹಳ್ಳಿ ಸುಭಾಷ್, ಸೋಮಣ್ಣ , ರಂಗಸ್ವಾಮಿ, ನಾಗೇಂದ್ರ, ಮುತ್ತಣ್ಣ, ಎಸ್ಸಿ, ಎಸ್ಟಿ ಮುಖಂಡರು ಹಾಜರಿದ್ದರು.
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ…
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…