ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿಯಲ್ಲಿ ಕಾಡಾನೆಗಳು ಹಿಂಡಾಗಿ ಬಂದು ಎಲೆಕೋಸು, ಕಬ್ಬು ಹಾಗೂ ತೆಂಗು ಬೆಳೆಯನ್ನು ಗುರುವಾರ ರಾತ್ರಿ ತಿಂದು, ತುಳಿದು ಹಾಳುಗೆಡಗಿವೆ.
ಗ್ರಾಮದ ಪುಟ್ಟಸ್ವಾಮಿ ಅವರ ಎಲೆಕೋಸು, ನಂಜುಂಡಬಾಯಿ ಅವರ ಕಬ್ಬು, ನಾಗೇಂದ್ರ ಅವರ ತೆಂಗಿನ ಸಸಿಗಳು ಮತ್ತು ಈ ರೈತರ ಸೋಲಾರ್ ತಂತಿಬೇಲಿ-ಕಲ್ಲುಗಳನ್ನು ಮುರಿದುಹಾಕಿವೆ. ಪರಶಿವಪ್ಪ ಅವರ ಜಮೀನಿನಲ್ಲೂ ತಂತಿಬೇಲಿ ಹಾಳು ಮಾಡಿವೆ.
ಆನೆಗಳ ದಾಂಧಲೆಯಿಂದ ಭಯಬೀತರಾದ ರೈತರು ಟ್ರಾಕ್ಟರ್ಗಳನ್ನು ರನ್ ಮಾಡಿ ಜೋರಾಗಿ ಶಬ್ದ ಮಾಡಲಾಗಿ ಅಲ್ಲಿಂದ ಕಾಲುಕಿತ್ತಿವೆ. 10ಆನೆಗಳು ಇನ್ನೂ ಊರ ಹೊರವಲಯದಲ್ಲೇ ಬೀಡುಬಿಟ್ಟಿವೆ. ರಾತ್ರಿ ಆಯಿತೆಂದರೆ ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ಹಾಳುಮಾಡುತ್ತಿದೆ. ಸುಮಾರು ಒಂದೂವರೆ ತಿಂಗಳಿಂದ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದರೂ ಆನೆಗಳ ಉಪಟಳ ತಡೆಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಬಿ.ಶಾಂತಮಲ್ಲಪ್ಪ ಆರೋಪಿಸಿದ್ದಾರೆ.
ತಮಿಳುನಾಡಿ ಕಾಡಿಗೆ ವಾಪಸ್ ಕಾಡಾನೆಗಳನ್ನು ಅಟ್ಟುವ ಬದಲು ಒಂದು ಊರಿನಿಂದ ಇನ್ನೊಂದು ಊರಿಗೆ ಕಳಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡುತ್ತಿದೆ. ಇದೇ ಪ್ರವೃತ್ತಿ ಮುಂದುವರಿದರೆ ರೈತರೊಡಗೂಡಿ ಅರಣ್ಯ ಇಲಾಖೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಅವರು ಎಚ್ಚರಿಸಿದ್ದಾರೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…