ಜಿಲ್ಲೆಗಳು

ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ : ಸಚಿವ ಸೋಮಣ್ಣ ಸ್ಪಷ್ಟನೆ

ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧ ರಿಂದ ೫ನೇ ತರಗತಿ ವರೆಗಿನ ಎಸ್ಸಿ, ಎಸ್ಟಿ ಬಾಲಕರಿಗೆ ೧೦೦೦ ರೂ.ಮ ಬಾಲಕಿಯರಿಗೆ ೧೧೦೦ ರೂ., ೬ ರಿಂದ ೭ನೇ ತರಗತಿಯ ಬಾಲಕರಿಗೆ ೧೧೫೦ ರೂ., ಬಾಲಕಿಯರಿಗೆ ೧೨೫೦ ರೂ. ಸ್ಕಾಲರ್ ಶಿಪ್ ನೀಡಲಾಗುತ್ತಿದೆ ಎಂದರು.
೮ನೇ ತರಗತಿಯ ಬಾಲಕರಿಗೆ ೧೨೫೦, ಬಾಲಕಿಯರಿಗೆ ೧೩೫೦ ರೂ., ೯ ರಿಂದ ೧೦ನೇ ತರಗತಿಯ ಮಕ್ಕಳಿಗೆ ಕೇಂದ್ರದಿAದ ಶೇ.೬೦ ರಷ್ಟು ಮತ್ತು ರಾಜ್ಯದಿಂದ ಶೇ.೪೦ ರಷ್ಟು ನೀಡಲಾಗುತ್ತಿದೆ. ಮನೆಯಿಂದ ಶಾಲೆಗೆ ಹೋಗುವವರಿಗೆ ೩ ಸಾವಿರ ರೂ., ಹಾಸ್ಟೆಲ್‌ನಲ್ಲಿ ಇರುವವರಿಗೆ ೭ ಸಾವಿರ ರೂ., ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ವರ್ಷ ಇಲ್ಲಿಯ ತನಕ ವಿದ್ಯಾರ್ಥಿವೇತನ ಕೋರಿ ೧ ರಿಂದ ೮ ತರಗತಿಯಿಂದ ೬.೯೧ ಲಕ್ಷ ಅರ್ಜಿ ಬಂದಿವೆ. ೯ ರಿಂದ ೧೦ ನೇ ತರಗತಿಯಿಂದ ೨.೧೦ ಲಕ್ಷ ಅರ್ಜಿ ಬಂದಿದ್ದು, ೧.೩೭ ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಶಾಸಕ ಎನ್.ಮಹೇಶ್ ಮಾತನಾಡಿ, ವಿದ್ಯಾರ್ಥಿವೇತನ ಸ್ಥಗಿತ ಎಂಬುದು ಕಾಂಗ್ರೆಸ್‌ನವರ ರಾಜಕೀಯ ಪಿತೂರಿಯಾಗಿದ್ದು, ಎಸ್ಸಿಎಸ್ಟಿ ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

andolanait

Recent Posts

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಡಿಸೆಂಬರ್‌ 14 ಭಾನುವಾರ

38 seconds ago

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

12 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

12 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

13 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

14 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

14 hours ago