ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧ ರಿಂದ ೫ನೇ ತರಗತಿ ವರೆಗಿನ ಎಸ್ಸಿ, ಎಸ್ಟಿ ಬಾಲಕರಿಗೆ ೧೦೦೦ ರೂ.ಮ ಬಾಲಕಿಯರಿಗೆ ೧೧೦೦ ರೂ., ೬ ರಿಂದ ೭ನೇ ತರಗತಿಯ ಬಾಲಕರಿಗೆ ೧೧೫೦ ರೂ., ಬಾಲಕಿಯರಿಗೆ ೧೨೫೦ ರೂ. ಸ್ಕಾಲರ್ ಶಿಪ್ ನೀಡಲಾಗುತ್ತಿದೆ ಎಂದರು.
೮ನೇ ತರಗತಿಯ ಬಾಲಕರಿಗೆ ೧೨೫೦, ಬಾಲಕಿಯರಿಗೆ ೧೩೫೦ ರೂ., ೯ ರಿಂದ ೧೦ನೇ ತರಗತಿಯ ಮಕ್ಕಳಿಗೆ ಕೇಂದ್ರದಿAದ ಶೇ.೬೦ ರಷ್ಟು ಮತ್ತು ರಾಜ್ಯದಿಂದ ಶೇ.೪೦ ರಷ್ಟು ನೀಡಲಾಗುತ್ತಿದೆ. ಮನೆಯಿಂದ ಶಾಲೆಗೆ ಹೋಗುವವರಿಗೆ ೩ ಸಾವಿರ ರೂ., ಹಾಸ್ಟೆಲ್ನಲ್ಲಿ ಇರುವವರಿಗೆ ೭ ಸಾವಿರ ರೂ., ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ವರ್ಷ ಇಲ್ಲಿಯ ತನಕ ವಿದ್ಯಾರ್ಥಿವೇತನ ಕೋರಿ ೧ ರಿಂದ ೮ ತರಗತಿಯಿಂದ ೬.೯೧ ಲಕ್ಷ ಅರ್ಜಿ ಬಂದಿವೆ. ೯ ರಿಂದ ೧೦ ನೇ ತರಗತಿಯಿಂದ ೨.೧೦ ಲಕ್ಷ ಅರ್ಜಿ ಬಂದಿದ್ದು, ೧.೩೭ ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಶಾಸಕ ಎನ್.ಮಹೇಶ್ ಮಾತನಾಡಿ, ವಿದ್ಯಾರ್ಥಿವೇತನ ಸ್ಥಗಿತ ಎಂಬುದು ಕಾಂಗ್ರೆಸ್ನವರ ರಾಜಕೀಯ ಪಿತೂರಿಯಾಗಿದ್ದು, ಎಸ್ಸಿಎಸ್ಟಿ ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.
ಮೈಸೂರು : ಹಲವಾರು ವರ್ಷಗಳಿಂದ ಕಣ್ತಪ್ಪಿನಿಂದ ಹಾಗೂ ಬೇನಾಮಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಸಿರುವ ನಿವೇಶನಗಳನ್ನು ಗುರುತಿಸಿ ರಕ್ಷಣೆ ಮಾಡುವುದಕ್ಕೆ ಎಂಡಿಎ…
ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮೂಡ)ದಲ್ಲಿ ನಿವೇಶನ ಪಡೆದ ಪ್ರಕರಣ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದವರಿಗೆ ಕಾನೂನು…
ಲಿಂಗಾಂಬುದಿಕೆರೆಗೆ ಹರಿಯುವ ಯುಜಿಡಿ ನೀರು ತಡೆಗೆ ಶೀಘ್ರ ಶಾಶ್ವತ ಪರಿಹಾರ ಮೈಸೂರು : ಹಲವು ತಿಂಗಳುಗಳಿಂದ ಒಳಚರಂಡಿ ನೀರು ಹರಿಯುವ…
ಬೆಂಗಳೂರು : ಬೆಂಗಳೂರಿನ ಸಿನಿಮಾ ಪ್ರೇಮಿಗಳು ಕುತೂಹಲ ಮತ್ತು ನಿರೀಕ್ಷೆಯಿಂದ ಕಾಯುತ್ತಿರುವ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ 17ನೇ ಅವತರಣಿಕೆಗೆ ವೇದಿಕೆ…
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…