ಜಿಲ್ಲೆಗಳು

ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ : ಸಚಿವ ಸೋಮಣ್ಣ ಸ್ಪಷ್ಟನೆ

ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧ ರಿಂದ ೫ನೇ ತರಗತಿ ವರೆಗಿನ ಎಸ್ಸಿ, ಎಸ್ಟಿ ಬಾಲಕರಿಗೆ ೧೦೦೦ ರೂ.ಮ ಬಾಲಕಿಯರಿಗೆ ೧೧೦೦ ರೂ., ೬ ರಿಂದ ೭ನೇ ತರಗತಿಯ ಬಾಲಕರಿಗೆ ೧೧೫೦ ರೂ., ಬಾಲಕಿಯರಿಗೆ ೧೨೫೦ ರೂ. ಸ್ಕಾಲರ್ ಶಿಪ್ ನೀಡಲಾಗುತ್ತಿದೆ ಎಂದರು.
೮ನೇ ತರಗತಿಯ ಬಾಲಕರಿಗೆ ೧೨೫೦, ಬಾಲಕಿಯರಿಗೆ ೧೩೫೦ ರೂ., ೯ ರಿಂದ ೧೦ನೇ ತರಗತಿಯ ಮಕ್ಕಳಿಗೆ ಕೇಂದ್ರದಿAದ ಶೇ.೬೦ ರಷ್ಟು ಮತ್ತು ರಾಜ್ಯದಿಂದ ಶೇ.೪೦ ರಷ್ಟು ನೀಡಲಾಗುತ್ತಿದೆ. ಮನೆಯಿಂದ ಶಾಲೆಗೆ ಹೋಗುವವರಿಗೆ ೩ ಸಾವಿರ ರೂ., ಹಾಸ್ಟೆಲ್‌ನಲ್ಲಿ ಇರುವವರಿಗೆ ೭ ಸಾವಿರ ರೂ., ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ವರ್ಷ ಇಲ್ಲಿಯ ತನಕ ವಿದ್ಯಾರ್ಥಿವೇತನ ಕೋರಿ ೧ ರಿಂದ ೮ ತರಗತಿಯಿಂದ ೬.೯೧ ಲಕ್ಷ ಅರ್ಜಿ ಬಂದಿವೆ. ೯ ರಿಂದ ೧೦ ನೇ ತರಗತಿಯಿಂದ ೨.೧೦ ಲಕ್ಷ ಅರ್ಜಿ ಬಂದಿದ್ದು, ೧.೩೭ ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಶಾಸಕ ಎನ್.ಮಹೇಶ್ ಮಾತನಾಡಿ, ವಿದ್ಯಾರ್ಥಿವೇತನ ಸ್ಥಗಿತ ಎಂಬುದು ಕಾಂಗ್ರೆಸ್‌ನವರ ರಾಜಕೀಯ ಪಿತೂರಿಯಾಗಿದ್ದು, ಎಸ್ಸಿಎಸ್ಟಿ ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

andolanait

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

52 mins ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

1 hour ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

1 hour ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

1 hour ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

1 hour ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

1 hour ago