ಜಿಲ್ಲೆಗಳು

ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ : ಸಚಿವ ಸೋಮಣ್ಣ ಸ್ಪಷ್ಟನೆ

ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧ ರಿಂದ ೫ನೇ ತರಗತಿ ವರೆಗಿನ ಎಸ್ಸಿ, ಎಸ್ಟಿ ಬಾಲಕರಿಗೆ ೧೦೦೦ ರೂ.ಮ ಬಾಲಕಿಯರಿಗೆ ೧೧೦೦ ರೂ., ೬ ರಿಂದ ೭ನೇ ತರಗತಿಯ ಬಾಲಕರಿಗೆ ೧೧೫೦ ರೂ., ಬಾಲಕಿಯರಿಗೆ ೧೨೫೦ ರೂ. ಸ್ಕಾಲರ್ ಶಿಪ್ ನೀಡಲಾಗುತ್ತಿದೆ ಎಂದರು.
೮ನೇ ತರಗತಿಯ ಬಾಲಕರಿಗೆ ೧೨೫೦, ಬಾಲಕಿಯರಿಗೆ ೧೩೫೦ ರೂ., ೯ ರಿಂದ ೧೦ನೇ ತರಗತಿಯ ಮಕ್ಕಳಿಗೆ ಕೇಂದ್ರದಿAದ ಶೇ.೬೦ ರಷ್ಟು ಮತ್ತು ರಾಜ್ಯದಿಂದ ಶೇ.೪೦ ರಷ್ಟು ನೀಡಲಾಗುತ್ತಿದೆ. ಮನೆಯಿಂದ ಶಾಲೆಗೆ ಹೋಗುವವರಿಗೆ ೩ ಸಾವಿರ ರೂ., ಹಾಸ್ಟೆಲ್‌ನಲ್ಲಿ ಇರುವವರಿಗೆ ೭ ಸಾವಿರ ರೂ., ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ವರ್ಷ ಇಲ್ಲಿಯ ತನಕ ವಿದ್ಯಾರ್ಥಿವೇತನ ಕೋರಿ ೧ ರಿಂದ ೮ ತರಗತಿಯಿಂದ ೬.೯೧ ಲಕ್ಷ ಅರ್ಜಿ ಬಂದಿವೆ. ೯ ರಿಂದ ೧೦ ನೇ ತರಗತಿಯಿಂದ ೨.೧೦ ಲಕ್ಷ ಅರ್ಜಿ ಬಂದಿದ್ದು, ೧.೩೭ ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಶಾಸಕ ಎನ್.ಮಹೇಶ್ ಮಾತನಾಡಿ, ವಿದ್ಯಾರ್ಥಿವೇತನ ಸ್ಥಗಿತ ಎಂಬುದು ಕಾಂಗ್ರೆಸ್‌ನವರ ರಾಜಕೀಯ ಪಿತೂರಿಯಾಗಿದ್ದು, ಎಸ್ಸಿಎಸ್ಟಿ ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

1 hour ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

2 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

2 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

3 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

3 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

4 hours ago