ಜಿಲ್ಲೆಗಳು

ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ : ಸಚಿವ ಸೋಮಣ್ಣ ಸ್ಪಷ್ಟನೆ

ಚಾಮರಾಜನಗರ: ಎಸ್ಸಿ,ಎಸ್ಟಿ, ವಿದ್ಯಾರ್ಥಿಗಳ ಯಾವುದೇ ವಿದ್ಯಾರ್ಥಿವೇತನ ಸ್ಥಗಿತಗೊಳಿಸಿಲ್ಲ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಸ್ಪಷ್ಟಪಡಿಸಿದರು.
ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ೧ ರಿಂದ ೫ನೇ ತರಗತಿ ವರೆಗಿನ ಎಸ್ಸಿ, ಎಸ್ಟಿ ಬಾಲಕರಿಗೆ ೧೦೦೦ ರೂ.ಮ ಬಾಲಕಿಯರಿಗೆ ೧೧೦೦ ರೂ., ೬ ರಿಂದ ೭ನೇ ತರಗತಿಯ ಬಾಲಕರಿಗೆ ೧೧೫೦ ರೂ., ಬಾಲಕಿಯರಿಗೆ ೧೨೫೦ ರೂ. ಸ್ಕಾಲರ್ ಶಿಪ್ ನೀಡಲಾಗುತ್ತಿದೆ ಎಂದರು.
೮ನೇ ತರಗತಿಯ ಬಾಲಕರಿಗೆ ೧೨೫೦, ಬಾಲಕಿಯರಿಗೆ ೧೩೫೦ ರೂ., ೯ ರಿಂದ ೧೦ನೇ ತರಗತಿಯ ಮಕ್ಕಳಿಗೆ ಕೇಂದ್ರದಿAದ ಶೇ.೬೦ ರಷ್ಟು ಮತ್ತು ರಾಜ್ಯದಿಂದ ಶೇ.೪೦ ರಷ್ಟು ನೀಡಲಾಗುತ್ತಿದೆ. ಮನೆಯಿಂದ ಶಾಲೆಗೆ ಹೋಗುವವರಿಗೆ ೩ ಸಾವಿರ ರೂ., ಹಾಸ್ಟೆಲ್‌ನಲ್ಲಿ ಇರುವವರಿಗೆ ೭ ಸಾವಿರ ರೂ., ವಿತರಿಸಲಾಗುತ್ತಿದೆ ಎಂದು ಹೇಳಿದರು.
ಈ ವರ್ಷ ಇಲ್ಲಿಯ ತನಕ ವಿದ್ಯಾರ್ಥಿವೇತನ ಕೋರಿ ೧ ರಿಂದ ೮ ತರಗತಿಯಿಂದ ೬.೯೧ ಲಕ್ಷ ಅರ್ಜಿ ಬಂದಿವೆ. ೯ ರಿಂದ ೧೦ ನೇ ತರಗತಿಯಿಂದ ೨.೧೦ ಲಕ್ಷ ಅರ್ಜಿ ಬಂದಿದ್ದು, ೧.೩೭ ಕೋಟಿ ರೂ. ಬಿಡುಗಡೆ ಆಗಿದೆ ಎಂದರು.
ಶಾಸಕ ಎನ್.ಮಹೇಶ್ ಮಾತನಾಡಿ, ವಿದ್ಯಾರ್ಥಿವೇತನ ಸ್ಥಗಿತ ಎಂಬುದು ಕಾಂಗ್ರೆಸ್‌ನವರ ರಾಜಕೀಯ ಪಿತೂರಿಯಾಗಿದ್ದು, ಎಸ್ಸಿಎಸ್ಟಿ ಮಕ್ಕಳನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದರು.

andolanait

Recent Posts

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 mins ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

10 mins ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

15 mins ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

3 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

3 hours ago

ಮೈಸೂರು ‘ಯೋಗ ಜಿಲ್ಲೆ’ ಘೋಷಣೆಗೆ ತಯಾರಿ

ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ  ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…

3 hours ago