ಜಿಲ್ಲೆಗಳು

ಸದೃಢವಾಗುತ್ತಿರುವ ಶತಮಾನ ಪೂರೈಸಿದ 4 ಶಾಲೆಗಳು

೫೪.೧೫ ಲಕ್ಷ ರೂ. ವೆಚ್ಚದಲ್ಲಿ ನಡೆಯುತ್ತಿರುವ ಮೂಲಸೌಕರ್ಯ ಕಾಮಗಾರಿ
ಚಾಮರಾಜನಗರ: ಜಿಲ್ಲೆಯಲ್ಲಿ ಶತಮಾನ ಪೂರೈಸಿರುವ ೩೫ ಶಾಲೆಗಳ ಪೈಕಿ ೪ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ದುರಸ್ತಿ ಹಾಗೂ ಅವಶ್ಯಕ ಕಟ್ಟಡ ನಿರ್ವಾಣಕ್ಕೆ ಶಿಕ್ಷಣ ಇಲಾಖೆ ೫೫.೧೫ಲಕ್ಷ ರೂ. ಬಿಡುಗಡೆ ವಾಡಿದ್ದು ಕಾಮಗಾರಿ ಪ್ರಗತಿುಂಲ್ಲಿದೆ. ಮಧುವನಹಳ್ಳಿ ಶಾಲೆ ಕಾಮಗಾರಿ ಅದಾಗಲೇ ಪೂರ್ಣಗೊಂಡಿದೆ.
ಈ ಶಾಲೆಗಳಿಗೆ ಏನೇನು ಅವಶ್ಯಕತೆ ಇದೆ ಎಂಬುದರ ಅಂದಾಜು ಪಟ್ಟಿ ತರಿಸಿಕೊಂಡು ಇದರ ಆಧಾರದ ಮೇಲೆ ಅನುದಾನ ಹಂಚಿಕೆ ವಾಡಿ ಕಾಮಗಾರಿ ನಿರ್ವಹಣೆಯನ್ನು ಜಿಪಂ ಇಂಜಿನಿಯರಿಂಗ್ ವಿಭಾಗಕ್ಕೆ(ಪಿಆರ್‌ಇಡಿ) ವಹಿಸಲಾಗಿದೆ.
ಕೊಳ್ಳೇಗಾಲ ತಾಲ್ಲೂಕು ಮಧುವನಹಳ್ಳಿ ಶಾಲೆಗೆ ೧೫ಲಕ್ಷ ರೂ., ಗುಂಡ್ಲುಪೇಟೆ ಟೌನ್ ಶಾಲೆಗೆ ೧೫ಲಕ್ಷ ರೂ., ಚಾಮರಾಜನಗರ ತಾ. ಉಮ್ಮತ್ತೂರು ಶಾಲೆಗೆ ೧೬.೫೦ಲಕ್ಷ ರೂ. ಹಾಗೂ ಹನೂರು ತಾಲ್ಲೂಕು ರಾವಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ೭.೬೫ಲಕ್ಷ ರೂ. ಅನುದಾನ ನೀಡಲಾಗಿದೆ. ೧೦೦ವರ್ಷ ಪೂರೈಸಿರುವ ರಾಜ್ಯದಲ್ಲಿನ ಸರ್ಕಾರಿ ಶಾಲೆಗಳನ್ನು ಸದೃಢಗೊಳಿಸಲು ಕರ್ನಾಟಕ ಸರ್ಕಾರ ೨೦೨೧-೨೨ನೇ ಸಾಲಿನಲ್ಲಿ ಮುಂದಾಗಿದ್ದು ಇದರಡಿ ಬಿಡುಗಡೆಯಾಗಿರುವ ಅನುದಾನದಿಂದ ಆದ್ಯತೆ ಮೇರೆಗೆ ಈ ೪ಶಾಲೆಗಳನ್ನು ಆಯ್ಕೆಮಾಡಲಾಗಿದೆ.
ಮೂಲಸ್ವರೂಪಕ್ಕೆ ಧಕ್ಕೆ ಆಗದಂತೆ ಈ ಶಾಲಾ ಹಳೆಯ ಕಟ್ಟಡಗಳನ್ನು ಸಾಧ್ಯವಾದಷ್ಟು ಹಾಗೆೆಯೇ ಉಳಿಸಿಕೊಂಡು ಕಾಮಗಾರಿ ನಡೆಸುವ ಉದ್ದೇಶ ಹೊಂದಲಾಗಿದೆ.
ಹಳೆ ಕಟ್ಟಡಗಳಾದ್ದರಿಂದ ಶಿಥಲಾವಸ್ಥೆ ತಲುಪಿದ್ದವು. ನೆಲ-ಗೋಡೆಗಳ ಗಾರೆ ಕಿತ್ತು ಬಂದಿತ್ತು. ಮೇಲ್ಛಾವಣಿ ಹಾಳಾಗಿ ಮಳೆ ನೀರು ಸೋರಿಕೆಾಂಗುತ್ತಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕೂ ಶಾಲೆಗಳ ನವೀಕರಣಕ್ಕೆ ಮುಂದಾಗಲಾಗಿದೆ.
ರಾಜ್ಯ ಸರ್ಕಾರದಿಂದ ಸ್ಥಾಪಿಸಲ್ಪಟ್ಟ ಜಿಲ್ಲಾ ಖನಿಜ ಪ್ರತಿಷ್ಠಾನ(ಡಿಎಂಎಫ್) ಶಾಸನಬದ್ಧ ಸಂಸ್ಥೆಯ ಮೂಲಕವೂ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸುವ ಕಾರ್ಯ ನಡೆಯುತ್ತಿದೆ.
ಗುಂಡ್ಲುಪೇಟೆ ತಾಲ್ಲೂಕು ಹಸಗೂಲಿ ಶಾಲೆಗೆ ೨೬.೫೦ಲಕ್ಷ ರೂ. ಡಿಎಂಎಫ್ ನಿಧಿಯಿಂದ ಮೂಲಭೂತ ಸೌಲಭ್ಯ, ಕಟ್ಟಡ ನವೀಕರಣ ಕೆಲಸವನ್ನು ಈ ಹಿಂದೆೆಯೇ ನಿರ್ಮಿತಿ ಕೇಂದ್ರದ ಮೂಲಕ ವಾಡಲಾಗಿದೆ. ಇದೇ ರೀತಿ ನಂಜೇದೇವನಪುರ, ವೀರನುಪುರ, ಕಟ್ನವಾಡಿ, ಹೆಗ್ಗೊಠಾರ, ಕೊತ್ತಲವಾಡಿ ಸರ್ಕಾರಿ ಶಾಲೆಗಳಿಗೂ ಮೂಲಸೌಕರ್ಯ ಒದಗಿಸುವ, ಅಗತ್ಯ ಇದ್ದರೆ ಹೆಚ್ಚುವರಿ ಕಟ್ಟಡ ನಿರ್ಮಿಸು ಕಾಮಗಾರಿಯನ್ನು ಡಿಎಂಎಫ್‌ನಿಂದ ಕೈಗೆತ್ತಿಕೊಳ್ಳಲು ಕ್ರೀಯಾಯೋಜನೆಯನ್ನು ಸಿದ್ದಪಡಿಸಿದ್ದು ಕಾಮಗಾರಿ ಆರಂಭವಾಗುವ ಹಂತದಲ್ಲಿ ಇರುವುದಾಗಿ ಇಲಾಖೆ ಮೂಲಗಳು ತಿಳಿಸಿವೆ.
ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಗಣಿ ಬಾಧಿತ ಆಗಿರುವ ಪ್ರದೇಶದ ಗ್ರಾಮಗಳಲ್ಲಿ ಡಿಎಂಎಫ್ ನಿಧಿಯನ್ನು ವಿನಿಯೋಗಿಸಲಾಗುತ್ತದೆ. ಈ ಹಿಂದೆಯೂ ೫೦.೫೦ಲಕ್ಷ ರೂ. ಡಿಎಂಎಫ್ ನಿಧಿಬಳಸಿ ೨೮ಸರ್ಕಾರಿ ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್, ವಿಜ್ಞಾನ ಪ್ರೋಯೋಗಾಲಯ ಇತ್ಯಾದಿ ಸೌಲಭ್ಯ ಕಲ್ಪಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಯೋಬ್ಬರು ವಾಹಿತಿ ನೀಡಿದರು.


೪ ಶತವಾನೋತ್ಸವ ಶಾಲೆಗಳ ಪೈಕಿ ಮಧುವನಹಳ್ಳಿ ಶಾಲೆ ಕಾಮಗಾರಿ ಮುಗಿದಿದ್ದು ಉಳಿದ ಮೂರು ಶಾಲೆಗಳ ಕಾಮಗಾರಿುಂನ್ನು ಇನ್ನು ೩ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು.
ಇಬ್ರಾಹಿಂ, ಕಾರ್ಯನಿರ್ವಾಹಕ ಇಂಜಿನಿಯರ್‌. ಪಿಆರ್‌ಇಡಿ.


೧೦೦ವರ್ಷ ಪೂರೈಸಿರುವ ನಾಲ್ಕು ಶಾಲೆಗಳಲ್ಲಿ ಅವಶ್ಯಕ ಕಾಮಗಾರಿ ಕೈಗೊಳ್ಳಲು ೫೪.೧೫ಲಕ್ಷ ರೂ. ಬಿಡುಗಡೆಯಾಗಿದೆ.

-ಮಂಜುನಾಥ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ

 

andolanait

Recent Posts

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿ ಆರೋಪ ; ಇಬ್ಬರು ಶಿಕ್ಷಕರು ಅಮಾನತ್ತು

ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…

3 hours ago

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…

4 hours ago

101 ತಾಲ್ಲೂಕುಗಳು ಬರಪೀಡಿತ ; ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಘೋಷಣೆ

89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…

4 hours ago

ಮೈಸೂರು | ಮಹಿಳಾ ಪೊಲೀಸ್‌ ಠಾಣೆಗೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…

5 hours ago

ಆಗಸ್ಟ್‌ 29 ರಂದು ಮೈಸೂರಿಗೆ ಮಾಜಿ ಸಿಎಂ ಆಗಮನ

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ…

5 hours ago

ಸಚಿವ ನಾಗೇಂದ್ರ ವಿರುದ್ಧ ಆರೋಪಕ್ಕೆ ಸಾಕ್ಷ್ಯಗಳಿಲ್ಲ : ಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…

5 hours ago